- Advertisement -
- Advertisement -
ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ದಂಪತಿ ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ಬೆಳಗಾವಿ ತಾಲೂಕಿನ ಬಿಜಗರ್ಣಿ ಗ್ರಾಮದಲ್ಲಿ ನಡೆದಿದೆ. ಅಮಿತ್ ದೇಸಾಯಿ(32), ಲತಾ ದೇಸಾಯಿ(27) ಮೃತ ಪಟ್ಟಿದ್ದಾರೆ.
ವಿದ್ಯುತ್ ಶಾಕ್ನಿಂದ ಒದ್ದಾಡುತ್ತಿದ್ದ ಪತಿಯನ್ನು ರಕ್ಷಿಸಲು ಹೋಗಿ ಪತ್ನಿಯೂ ಮೃತ ಪಟ್ಟಿದ್ದಾಳೆ. ಬೆಳೆ ಕ್ರಿಮಿನಾಶಕ ಸಿಂಪಡಣೆ ಮಾಡುವ ವೇಳೆ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ದಂಪತಿ ಸಾವನ್ನಪ್ಪಿದ್ದಾರೆ ಎಂದು ಆರೋಪ ಕೇಳಿಬಂದಿದೆ.
ಬೆಳಗಾವಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -