Tuesday, May 14, 2024
spot_imgspot_img
spot_imgspot_img

ಸಂತ್ರಸ್ಥೆ ಯುವತಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಅನುಮತಿ

- Advertisement -G L Acharya panikkar
- Advertisement -

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆ ಎಂದು ಹೇಳಿಕೊಳ್ಳುವ ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ನ್ಯಾಯಾಲಯ ಅನುಮತಿಯನ್ನು ಸೂಚಿಸಿದೆ.

ಯುವತಿ, ತಮಗೆ ಜೀವ ಭಯವಿರುವ ಕಾರಣ ಹಾಗೂ ಎಸ್‌ಐಟಿ ಮೇಲೆ ನಂಬಿಕೆ ಇಲ್ಲದಿರುವುದರಿಂದ ನ್ಯಾಯಾಧೀಶರ ಮುಂದೆಯೇ ಹೇಳಿಕೆ ನೀಡುವುದಾಗಿ ಹೇಳಿದ್ದು, ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ನ್ಯಾಯಾಲಯದ ಮುಂದೆ ಯುವತಿ ಹೇಳಿಕೆ ದಾಖಲಿಸಿದ ಬಳಿಕ ತನಿಖಾಧಿಕಾರಿಗಳು ಯುವತಿಯ ವಿಚಾರಣೆ ನಡೆಸಬಹುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆನ್ನಲಾಗಿದೆ.

driving

ನ್ಯಾಯಾಲಯದ ಅನುಮತಿ ಸಿಕ್ಕಿರುವ ಹಿನ್ನಲೆಯಲ್ಲಿ ಯುವತಿ ಬಹುತೇಕ ಇಂದೇ ಹಾಜರಾಗಿ ತಮ್ಮ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸುವ ನಿರೀಕ್ಷೆಯಿದೆ.

- Advertisement -

Related news

error: Content is protected !!