- Advertisement -
- Advertisement -
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಅಬ್ಬರ ಹೆಚ್ಚಳವಾಗುತ್ತಿದ್ದು, ಲಾಕ್ ಡೌನ್ ಮಾಡಬೇಕೋ, ಮಾಡಬಾರದೋ ಎಂಬುದು ಜನರ ಕೈಯಲ್ಲಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಮತ್ತೆ ಲಾಕ್ ಡೌನ್ ಪರಿಸ್ಥಿತಿ ನಿರ್ಮಾಣವಾದರೆ ಅದಕ್ಕೆ ಜನರೇ ಕಾರಣ. ಕೋವಿಡ್ ನಿಯಮ ಪಾಲಿಸದಿದ್ದರೆ ಮತ್ತೆ ಲಾಕ್ ಡೌನ್ ಮಾಡುವ ಪರಿಸ್ಥಿತಿ ಬರಬಹುದು ಎಂದು ಹೇಳುವ ಮೂಲಕ ಸಚಿವ ಸುಧಾಕರ್ ಲಾಕ್ ಡೌನ್ ಬಗ್ಗೆ ಪರೋಕ್ಷ ಸುಳಿವು ಕೊಟ್ಟಿದ್ದಾರೆ.
- Advertisement -