- Advertisement -
- Advertisement -
ವಿಟ್ಲ: ಕೋವಿಡ್ 19 ನಿಯಮವನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ವ್ಯಕ್ತಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೇಪು ಗ್ರಾಮದ ಪಂಚತ್ತೋಡಿ ನಿವಾಸ ರಾಮಚಂದ್ರ ಪಂಚತೋಡಿ, ಹಾಗೂ ಸಾಲೆತ್ತೂರು ಗ್ರಾಮದ ಕೊಲ್ಲಾಡಿ ನಿವಾಸಿ ಅನೀಲ್ ಶೆಟ್ಟಿ ಅವರ ಮೇಲೆ ಬಂಟ್ವಾಳ ತಹಶೀಲ್ದಾರ್ ಅವರು ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ. ಕೋವೀಡ್-19 ಸಾಂಕ್ರಾಮಿಕ ರೋಗ ತಡೆಗಟ್ಟುವ ಕುರಿತು ಕ್ವಾರೆಂಟೈನ್ ನಿಯಮ ಉಲ್ಲಾಂಘಿಸಿದ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯಿಂದ ಜಿಪಿಎಸ್ ಆಧಾರಿತ ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗಿದೆ.
- Advertisement -