Friday, March 29, 2024
spot_imgspot_img
spot_imgspot_img

ಗೋ ಹತ್ಯೆ ನಿಷೇಧ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಕಿತ.

- Advertisement -G L Acharya panikkar
- Advertisement -

ಬೆಂಗಳೂರು : ವಿಧಾನ ಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾನೂನು ಮಸೂದೆ ಅಂಗೀಕಾರ ಮಾಡಲಾಗಿತ್ತು. ಈ ಕಾಯ್ದೆ ಪರಿಷತ್ ನಲ್ಲಿ ಅಂಗೀಕರಿಸುವ ಮುನ್ನವೇ ಅನಿರ್ಧಿಷ್ಠಾವಧಿಗೆ ಮುಂದೂಡಲ್ಪಟ್ಟಿತ್ತು. ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಸೂಚಿಸಲಾಗಿತ್ತು.

ಇದೀಗ ಈ ಕಾನೂನಿಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಜಾರಿಗೊಂಡಿದೆ.
ರಾಜ್ಯದಲ್ಲಿ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಗೋಹತ್ಯೆ ನಿಷೇಧ ಕಾಯ್ದೆ ವಿಧಾನಸಭೆಯಲ್ಲಿ ಅಂಗೀಕರಿಸಲ್ಪಟ್ಟ ನಂತರ ವಿಧಾನ ಪರಿಷತ್ ನಲ್ಲಿ ಅಂಗೀಕಾರಕ್ಕೂ ಮುನ್ನಾ ಅನಿರ್ಧಿಷ್ಠಾವಧಿಗೆ ಮುಂದೂಡಲಾಗಿತ್ತು.

ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುವುದಕ್ಕೆ ಸಿಎಂ ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿತ್ತು. ಈ ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ಕೊಡಲಾಗಿತ್ತು. ಇದೀಗ ರಾಜ್ಯಪಾಲರು ಗೋಹತ್ಯೆ ನಿಷೇಧ ಕಾನೂನ ಸುಗ್ರೀವಾಜ್ಞೆ ಕಾಯ್ದೆಗೆ ಸಹಿ ಹಾಕಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಂಡಿದೆ. ಇನ್ನು ಮುಂದೆ ಗೋಹತ್ಯೆ ರಾಜ್ಯದಲ್ಲಿ ನಿಷೇಧಗೊಂಡಂತಾಗಿದೆ.

ಹತ್ಯೆಗಾಗಿ ಜಾನುವಾರು ಮಾರಾಟ ಮಾಡಿದ್ರೆ, ಜಾನುವಾರು ಜಪ್ತಿ.

ನಿಯಮ ಉಲ್ಲಂಘಿಸಿದ್ರೆ 50 ಸಾವಿರದಿಂದ 5 ಲಕ್ಷದವರೆಗೂ ದಂಡ.

ಜೊತೆಗೆ 3 ವರ್ಷದಿಂದ 7 ವರ್ಷದವರೆಗೂ ಜೈಲುವಾಸ ಅನುಭವಿಸಬೇಕಾಗುತ್ತದೆ ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

- Advertisement -

Related news

error: Content is protected !!