Saturday, June 28, 2025
spot_imgspot_img
spot_imgspot_img

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಂ ಯೆಚೂರಿ ಪಾರ್ಥೀವ ಶರೀರ ಏಮ್ಸ್ ಆಸ್ಪತ್ರೆಗೆ ದಾನ

- Advertisement -
- Advertisement -

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಕುಟುಂಬಸ್ಥರು ಅವರ ಪಾರ್ಥೀವ ಶರೀರವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ ಮೆಡಿಕಲ್ ಕೇಂದ್ರಕ್ಕೆ ದಾನ ಮಾಡಿದ್ದಾರೆ.

ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ (72) ನಿಧನರಾಗಿದ್ದರು.

ರಾಜ್ಯದ ಹಲವು ರಾಜಕೀಯ ಗಣ್ಯರು ಯಚೂರಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ನಿನ್ನೆ ಮಧ್ಯಾಹ್ನ ಯೆಚೂರಿ ಕುಟುಂಬಸ್ಥರು ಯಚೂರಿ ಅವರ ಮೃತದೇಹವನ್ನು ಸಂಶೋಧನೆಗಾಗಿ ನವದೆಹಲಿಯ ಏಮ್ಸ್‌ ಮೆಡಿಕಲ್ ಕೇಂದ್ರಕ್ಕೆ ನೀಡಲಾಗಿದೆ.

ಯೆಚೂರಿ ಅವರ ಮೃತದೇಹ ಉಪಯೋಗವಾಗಲಿ, ಅವರ ನಿಧನದ ಬಳಿಕವೂ ಅವರ ದೇಹ ಉಪಯೋಗವಾಗಲಿ ಎಂಬ ಕಾರಣಕ್ಕೆ ಏಮ್ಸ್ ಮೆಡಿಕಲ್ ಕೇಂದ್ರಕ್ಕೆ ನೀಡಲಾಗಿದೆ. ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಂಶೋಧನೆಗಾಗಿ ಶವವನ್ನು ಬಳಸಲಾಗುತ್ತದೆ. ಅಂತಹ ಬಳಕೆಗೆ ಯಚೂರಿ ಮೃತದೇಹ ಉಪಯೋಗವಾಗಲಿ ಎಂದು ಕುಟುಂಬಸ್ಥರು ಈ ನಿರ್ಧಾರ ಮಾಡಿದ್ದಾರೆ.

ತೀವ್ರ ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸೀತಾರಾಂ ಯೆಚೂರಿ ಅವರನ್ನು ಏಮ್ಸ್‌ನ ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿತ್ತು. ಕಳೆದ ಕೆಲವು ದಿನಗಳಿಂದ ಅವರು ಕೃತಕ ಉಸಿರಾಟದ ಬೆಂಬಲದಲ್ಲಿದ್ದರು. ವೈದ್ಯರ ಬಹುಶಿಸ್ತೀಯ ತಂಡದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಕೊನೆಯುಸಿರೆಳೆದಿದ್ದರು.

Related : Top Up Valorant

- Advertisement -

Related news

error: Content is protected !!