Tuesday, April 30, 2024
spot_imgspot_img
spot_imgspot_img

ಸಾಲಗಾರರ ಕಿರುಕುಳ; ನೇಣು ಬಿಗಿದು ರೈತ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಸಾಲದ ಸುಳಿಗೆ ಸಿಲುಕಿ ಬೇಸತ್ತ ರೈತನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ಮೀಸೆ ಗಂಗಣ್ಣ (45) ಎಂದು ಗುರುತಿಸಲಾಗಿದೆ.

ಈತ ಕೃಷಿಗಾಗಿ 20 ಲಕ್ಷ ರೂ.ಗಳಷ್ಟು ಹಣವನ್ನು ಕೈಸಾಲವಾಗಿ ಪಡೆದಿದ್ದ. ಸಾಲಗಾರರ ಕಿರುಕುಳದಿಂದ ಬೇಸತ್ತಿದ್ದ ಎನ್ನಲಾಗಿದೆ. ಸಾಲಗಾರರು ಮನೆಗೆ ಬಂದು ಗಲಾಟೆ ಮಾಡಿ ಸಾಲದ ಹಣ ಕೊಡುವಂತೆ ಧಮ್ಕಿ ಹಾಕಿದ್ದಾರೆನ್ನಲಾಗಿದ್ದು, ಬೇಸತ್ತ ಮೀಸೆ ಗಂಗಣ್ಣ ರಾತ್ರಿ ತೋಟದಲ್ಲಿನ ಹಲಸಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾನೆ. ತೋಟಕ್ಕೆ ಹೋದವರು ಬರಲಿಲ್ಲವೆಂದು ಕುಟುಂಬಸ್ಥರು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!