Sunday, June 21, 2026
spot_imgspot_img
spot_imgspot_img

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತಿಯಿಂದಲೇ ಪತ್ನಿಯ ಬರ್ಬರ ಹತ್ಯೆ

- Advertisement -
- Advertisement -

ಕೋಲಾರ: ಪ್ರೀತಿಸಿ ಮದುವೆಯಾಗಿದ್ದ ಪತಿಯೇ ಪತ್ನಿಯ ಕುತ್ತಿಗೆ ಕೊಯ್ದು ಕೊಲೆಗೈದಿರುವ ಆಘಾತಕಾರಿ ಘಟನೆ ಮಾಲೂರು ತಾಲೂಕಿನ ಮಿಂಡಹಳ್ಳಿ ಕೆರೆ ಬಳಿ ನಡೆದಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಮೂಲದ ಯೋಗಿನಿ (21) ಕೊಲೆಯದ ದುರ್ದೈವಿ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಆವಲಹಳ್ಳಿ ಮೂಲದ ಗಣೇಶ್ ಎಂಬಾತನಿಂದ ಕೊಲೆಯಾಗಿದೆ.

ಈ ದಂಪತಿ 2 ವರ್ಷಗಳ ಹಿಂದೆ ಪ್ರೀತಿಸಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಯೋಗಿನಿ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದರು. ಇತ್ತೀಚಿಗೆ ಹೆಂಡತಿ ಮೇಲೆ ಅನುಮಾನಪಟ್ಟು ಗಣೇಶ್ ಗಲಾಟೆ ಮಾಡಿಕೊಂಡಿದ್ದನು. ಈ ಹಿನ್ನೆಲೆ ಚಾಕುವಿನಿಂದ ಕುತ್ತಿಗೆ ಕೊಯ್ದು ಬರ್ಬರವಾಗಿ ಹತ್ಯೆಗೈದಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿರುವುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!