Thursday, August 6, 2026
spot_imgspot_img
spot_imgspot_img

ಶಾಲಾ ಬಸ್​ನಲ್ಲಿ ಸೀಟಿಗಾಗಿ ವಿದ್ಯಾರ್ಥಿಗಳ ನಡುವೆ ಜಗಳ- ಓರ್ವ ಸಾವು

- Advertisement -
- Advertisement -

ಸೇಲಂ: ಶಾಲಾ ಬಸ್ಸಿನ ಸೀಟಿಗಾಗಿ ಇಬ್ಬರು ವಿದ್ಯಾರ್ಥಿಗಳ ನಡುವೆ ನಡೆದ ಜಗಳ ದುರಂತ ಸಾವಿನೊಂದಿಗೆ ಅಂತ್ಯವಾದ ಘಟನೆ ಸೇಲಂ ಜಿಲ್ಲೆಯಲ್ಲಿ ನಡೆದಿದೆ‌.9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ಕುರಿತು ಜಗಳ ನಡೆದಿತ್ತು.

ಈ ಜಗಳ ತಾರಕಕ್ಕೇರಿತು, ಮತ್ತು ಆ ಕ್ಷಣದಲ್ಲಿ ಸರವಣನ್ ಕಂದಗುರುವನ್ನು ತಳ್ಳಿದ ಪರಿಣಾಮ ಆತ ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎಂದು ಹೇಳಲಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದ್ದಾನೆ.ಘಟನೆಯ ನಂತರ, ಸೇಲಂ ಪೊಲೀಸರು ಸರವಣನ್​ನ್ನು ವಶಕ್ಕೆ ಪಡೆದಿದ್ದಾರೆ, ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು. ಹಾಗೂ ವಾಗ್ವಾದಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -

Related news

error: Content is protected !!