- Advertisement -
- Advertisement -



ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈತ ಭಾನುವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಆದರ್ಶ್ ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯನ್ನು ಬರಿದು ಮಾಡಿ ಮೀನುಗಾರಿಕೆ ನಡೆಸುತ್ತಿದ್ದನು. ಈ ವೇಳೆ ಆತ ತನ್ನ ಬಾಯಿಯಲ್ಲಿ ಹಿಡಿದಿದ್ದ ಮೀನು ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ.ಕೂಡಲೇ ಯುವಕನನ್ನು ಓಚಿರಾ ಬಳಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅವನ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಆದರ್ಶ್ನ ಮೃತದೇಹವನ್ನು ಕಾಯಂಕುಳಂ ತಾಲೂಕು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯ (ಬಿಎನ್ಎಸ್ಎಸ್) ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
- Advertisement -








