- Advertisement -
- Advertisement -
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವ ಘಟನೆ ಬೆಳ್ತಂಗಡಿ ಸಮೀಪ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ.
ಮಿತ್ತಬಾಗಿಲು ಗ್ರಾಮ ಬೆಳ್ತಂಗಡಿ ನಿವಾಸಿ ಮೋಹನ ಎಂಬವರು ಎಂದಿನಂತೆ ಬೆಳಿಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆಂದು ಹೊರಟು ಮಿತ್ತಬಾಗಿಲು ಗ್ರಾಮದ ಶಾಂತಿಗುಡ್ಡೆ ಎಂಬಲ್ಲಿ ಓಬಯ್ಯ ಪೂಜಾರಿ ಎಂಬವರೊಂದಿಗೆ ಮಾತನಾಡುತ್ತಿದ್ದಾಗ, ಪ ಸದಾಶಿವ ಯಾನೆ ಮೇದಪ್ಪ ಎಂಬಾತನು ಮೋಟರ್ ಸೈಕಲ್ ನಲ್ಲಿ ಬಂದು, ಮೋಹನರನ್ನು ಉದ್ದೇಶಿಸಿ ಅವಾಚ್ಯ ಶಬ್ದಗಳಿಂದ ಬೈದು ,ಅಲ್ಲಿಯೇ ಇದ್ದ ಮರದ ದೊಣ್ಣೆಯಿಂದ ಹಲ್ಲೆ ನಡೆಸಿದ್ದು, ಈ ವೇಳೆ ಓಬಯ್ಯ ಪೂಜಾರಿಯವರು ಹಲ್ಲೆಯನ್ನು ತಡೆದಿದ್ದಾರೆ.
ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 100/2023 ಕಲಂ: 324,323,504,506 IPC ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -