Saturday, September 5, 2026
spot_imgspot_img
spot_imgspot_img

ವಿಟ್ಲ: ಮಹಿಳೆ ಮೇಲೆ ಕತ್ತಿ ದಾಳಿ

- Advertisement -
- Advertisement -

ಓರ್ವ ಪೊಲೀಸ್ ವಶಕ್ಕೆ

ವಿಟ್ಲ: ಜಾಗಕ್ಕೆ ಸಂಬಂಧಿಸಿದ ಕಲಹವೊಂದು ಭೀಕರ ರೂಪ ಪಡೆದು ಮಹಿಳೆಯೊಬ್ಬರ ಮೇಲೆ ಕತ್ತಿಯಿಂದ ದಾಳಿ ನಡೆಸಿದ ಘಟನೆ ಕೊಲ್ನಾಡು ಗ್ರಾಮದ ತಾಳಿತ್ತನೂಜಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸಂಬಂಧ ಓರ್ವ ಆರೋಪಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆತಾಳಿತ್ತನೂಜಿ ನಿವಾಸಿ 23 ವರ್ಷದ ಹಸೀನಾ ಗಂಭೀರ ಗಾಯಗೊಂಡವರು. ಮಹಮ್ಮದ್ ಅಶ್ರಫ್ (32) ಕೃತ್ಯ ಎಸಗಿದಾತ ಎಂದು ಹೇಳಲಾಗಿದೆ.ತಾಳಿತ್ತನೂಜಿಯ ಸುಲೈಮಾನ್ ಅವರ ಪತ್ನಿಯ ಪುತ್ರಿಯಾದ ಹಸೀನಾ ಮೇಲೆ, ಸುಲೈಮಾನ್ ಅವರ ಎರಡನೇ ಪತ್ನಿಯ ಪುತ್ರ ಮಹಮ್ಮದ್‌ ಅಶ್ರಫ್ ಕತ್ತಿಯಿಂದ ದಾಳಿ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಕೊಲೆ ಯತ್ನದ ಉದ್ದೇಶದಿಂದ ಹಸೀನಾ ಅವರ ಕುತ್ತಿಗೆಗೆ ಕತ್ತಿ ಬೀಸುವಾಗ, ಅವರು ತಮ್ಮ ಕೈ ಅಡ್ಡವಿಟ್ಟಿದ್ದಾರೆ. ಇದರಿಂದ ಹಸೀನಾ ಅವರ ಬೆರಳಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಾಹಿತಿ ಪಡೆದ ತಕ್ಷಣ ವಿಟ್ಲ ಪೊಲೀಸ್ ಠಾಣೆಯ ಉಪನಿರೀಕ್ಷಕ ಮತ್ತು ಅವರ ತಂಡ ಸ್ಥಳಕ್ಕೆ ಧಾವಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಈ ಸಂದರ್ಭದಲ್ಲಿ ಆರೋಪಿ ಮಹಮ್ಮದ್ ಅಶ್ರಫ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಘಟನೆಯ ಕುರಿತು ಸುಖೋ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಅಗತ್ಯ ತನಿಖೆ ಕೈಗೊಂಡಿದೆ.ಜಾಗದ ತಕರಾರೇ ಈ ದಾಳಿಗೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!