ಶಿಕ್ಷಕರೊಬ್ಬರು ಪತ್ನಿಯನ್ನು ಹತ್ಯೆ ಮಾಡಿ, ಬೆಂಕಿ ಹಚ್ಚಿರುವ ಹೃದಯ ವಿದ್ರಾವಕ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.
ಶ್ರೀಕಾಂತ್ ತಿವಾರಿ ಹಾಗೂ ದೀಪ್ತಿ ದಂಪತಿಗಳು ಉತ್ತರ ಪ್ರದೇಶ ಮೂಲದವರಾಗಿದ್ದು, ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ಸೆಂಟ್ರಲ್ ಕೋಲ್ಕತ್ತಾದ 24 ಜಾದುನಾಥ್ ಡೇ ರಸ್ತೆಯಲ್ಲಿರುವ ಎರಡನೇ ಮಹಡಿಯ ಫ್ಲಾಟ್ನಲ್ಲಿ ವಾಸಿಸುತ್ತಿದ್ದರು
ನಾಲ್ಕು ತಿಂಗಳ ಹಿಂದಷ್ಟೇ ಮದುವೆಯಾಗಿತ್ತು, ಸುಖ ಸಂಸಾರ ಯಾವುದಕ್ಕೂ ಕೊರತೆ ಇರಲಿಲ್ಲ ಆದರೆ ಕಾರು ಖರೀದಿ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ತಿವಾರಿ ಕೋಪದಲ್ಲಿ ಪತ್ನಿಯ ಕಪಾಳಕ್ಕೆ ಹೊಡೆದಿದ್ದಾನೆ, ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಪತ್ನಿಯ ಸಾವನ್ನು ಮರೆ ಮಾಚಲು ದೇಹಕ್ಕೆ ಬೆಂಕಿ ಹಚ್ಚಿದ್ದಾನೆ. ಪೊಲೀಸರು ಸ್ಥಳಕ್ಕಾಗಮಿಸಿ ವಿಚಾರಿಸಿದಾಗ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಬೂಬು ಹೇಳಿದ್ದಾನೆ.
ಅರ್ಧ ಸುಟ್ಟ ಶವದ ಮರಣೋತ್ತರ ಪರೀಕ್ಷೆ ನಡೆಸಿ ಆರೋಪಿ ಶ್ರೀಕಾಂತ್ ತಿವಾರಿಯನ್ನು ಬಂಧಿಸಿದ್ದಾರೆ. ಮರಣೋತ್ತರ ಪರೀಕ್ಷೆ ವರದಿ ಬಂದ ಕೂಡಲೇ ಆರೋಪಿಯನ್ನು ಬಂಧಿಸಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ತಕ್ಷಣ ಪೊಲೀಸರು ವಿಚಾರಣೆ ವೇಳೆ ಆರೋಪಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.