- Advertisement -
- Advertisement -
ಕಡಬ:ಬಾಣಂತಿ ಮಹಿಳೆಯೋರ್ವರು ತೀವ್ರ ರಕ್ತಸ್ರಾವಕ್ಕೊಳಗಾಗಿ ಮೃತಪಟ್ಟ ದಾರುಣ ಘಟನೆ ಭಾನುವಾರದಂದು ಕಡಬದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಕೊಂಬಾರು ಗ್ರಾಮದ ಮಣಿಬಾಂಡ ಸಮೀಪದ ಕೆರೊಂದೋಡಿ ನಿವಾಸಿ ಬಾಲಕೃಷ್ಣ ಎಂಬವರ ಪತ್ನಿ ಸುನೀತಾ(35) ಎಂದು ಗುರುತಿಸಲಾಗಿದೆ. ಏಳನೇ ಮಗುವನ್ನು ಗರ್ಭಿಣಿಯಾಗಿದ್ದ ಈಕೆಗೆ ಭಾನುವಾರದಂದು ಮನೆಯಲ್ಲೇ ಹೆರಿಗೆಯಾಗಿದ್ದು, ತೀವ್ರವಾಗಿ ರಕ್ತಸ್ರಾವಕ್ಕೊಳಗಾದ ಮಹಿಳೆಯನ್ನು ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆತರಲಾಯಿತಾದರೂ ಅದಾಗಲೇ ಮೃತಪಟ್ಟರು ಎಂದು ತಿಳಿದುಬಂದಿದೆ. ಮಗು ಆರೋಗ್ಯವಾಗಿದ್ದು, ಪುತ್ತೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -