Saturday, June 28, 2025
spot_imgspot_img
spot_imgspot_img

ಮಾರಕಾಸ್ತ್ರಗಳಿಂದ ಕೊ‌ಚ್ಚಿ ವ್ಯಕ್ತಿಯ ಕೊಲೆಗೈದ ದುಷ್ಕರ್ಮಿಗಳು..!

- Advertisement -
- Advertisement -

ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಕುಣಿಗಲ್ ವ್ಯಾಪ್ತಿಯ ಕುಳ್ಳನಂಜನಪಾಳ್ಯ ಗ್ರಾಮದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿ ಕುಳ್ಳ ನಂಜನಪಾಳ್ಯ ಗ್ರಾಮದ ಮರಿಯಪ್ಪ(50) ಎಂದು ಗುರುತಿಸಲಾಗಿದೆ.

ಕಳೆದ ಶುಕ್ರವಾರ ಮರಿಯಪ್ಪ ತನ್ನ ಮನೆಯವರಿಗೆ ಹೊರಗೆ ಹೊಗಿ ಬರುತ್ತೇನೆ ಎಂದು ಹೇಳಿ ಹೋಗಿ ವಾಪಸ್ ಮನೆಗೆ ಬರದಿರುವುದರಿಂದ ಅನುಮಾನಗೊಂಡ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಲು ಮುಂದಾಗುವಷ್ಟರಲ್ಲಿ ಮರಿಯಪ್ಪ ಅವರು ಹೇರೂರು, ಕುಳ್ಳನಂಜನಪಾಳ್ಯ ಗ್ರಾಮದ ಮಧ್ಯೆ ಕೊಲೆಯಾಗಿದ್ದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕುಣಿಗಲ್ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಕೊಲೆಯ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ.

- Advertisement -

Related news

error: Content is protected !!