Saturday, May 4, 2024
spot_imgspot_img
spot_imgspot_img

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಸ್ನೇಹಿತನನ್ನೇ ಕೊಲೆ ಮಾಡಿದ ದುಷ್ಕರ್ಮಿಗಳು; ಆರೋಪಿ ಅರೆಸ್ಟ್..!

- Advertisement -G L Acharya panikkar
- Advertisement -

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಆಂಧ್ರಪ್ರದೇಶ ಮೂಲದ ತನ್ನ ಸ್ನೇಹಿತನನ್ನೇ ದುಷ್ಕರ್ಮಿಗಳು ಕೊಲೆ ಮಾಡಿ ಮೃತದೇಹವನ್ನು ಗುಹೆಯಲ್ಲಿ ಸುಟ್ಟುಹಾಕಿ ತಲೆಮರೆಸಿಕೊಂಡಿರುವ ಆರೋಪಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ವಾತವಾಳ್ಯ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದವರನ್ನು ಆಂಧ್ರಪ್ರದೇಶದ ದಾದಿವಾರಪಲ್ಲಿ ನಿವಾಸಿ ವೆಂಕಟರಮಣ ನಾಯ್ಕ ಎನ್ನಲಾಗಿದೆ. ಹಾಗೂ ಆರೋಪಿಗಳನ್ನು ಬಾಬು ಮತ್ತು ಪ್ರಭಾಕರ್ ಎಂದು ಗುರುತಿಸಲಾಗಿದೆ.

ವೆಂಕಟರಮಣನ ತಂದೆ ಅಮ್ಮಡಗೂರು ಪೊಲೀಸ್ ಠಾಣೆಗೆ ನಾಪತ್ತೆ ಪ್ರಕರಣ ದಾಖಲಿಸಿದ್ದರು. ತನಿಖೆ ಆರಂಭಿಸಿದ ಪೊಲೀಸರಿಗೆ ವೆಂಕಟರಮಣನ ಸ್ನೇಹಿತರಾದ ಸ್ವಗ್ರಾಮದ ಬಾಬು ಮತ್ತು ಪ್ರಭಾಕರ್ ಮೇಲೆ ಅನುಮಾನ ಬಂದಿತ್ತು. ವೆಂಕಟರಮಣ ನಾಯ್ಕ, ಬಾಬು, ಪ್ರಭಾಕ‌ರ್ ಮೂವರು ಸ್ನೇಹಿರಾಗಿದ್ದರು. ಬಾಬು ಹಾಗೂ ವೆಂಕಟರಮಣ ನಾಯ್ಕ ಮಧ್ಯೆ ಜಮೀನು ವಿವಾದ ಇತ್ತು. ಈ ವಿಚಾರವಾಗಿ ವೆಂಕಟರಮಣ ನಾಯ್ಕ ಪದೆ ಪದೆ ಜಗಳ ಮಾಡುತ್ತಿದ್ದನು. ಇದರಿಂದ ಕೋಪಗೊಂಡ ಬಾಬು ವೆಂಕಟರಮಣನನ್ನು ಗಡಿನಾಡು ವಂಡಮಾನ್ ಬಳಿ ಕರೆತಂದು ಮದ್ಯಪಾನ ಮಾಡಿಸಿದ್ದಾರೆ. ನಂತರ ಆತನ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಈ ಕುರಿತು ಸ್ವತಃ ಆರೋಪಿ ಬಾಬು ಪೊಲೀಸರು ಮುಂದೆ ಬಾಯಿ ಬಿಟ್ಟಿದ್ದಾನೆ.

ಈ ಕುರಿತು ಪೊಲೀಸರು ಕರ್ನಾಟಕದ ಪಾತಪಾಳ್ಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಾಬುನನ್ನು ವಶಕ್ಕೆ ಪಡೆದು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಆಂಧ್ರದ ಪೊಲೀಸರು ಆರೋಪಿ ಬಾಬುವನ್ನು ವಶಕ್ಕೆ ಪಡೆದು ತನಿಖೆ ಆರಂಬಿಸುತ್ತಿರುವ ವಿಚಾರ ತಿಳಿದ ಮತ್ತೊಬ್ಬ ಆರೋಪಿ ಪ್ರಭಾಕರ್ ಪೊಲೀಸರ ತನಿಖೆಗೆ ಹೆದರಿ ಸ್ವಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಕೊಲೆ ಮಾಡಿದ ಸ್ಥಳಕ್ಕೆ ಕರ್ನಾಟಕ ರಾಜ್ಯಕ್ಕೆ ಸೇರಿರುವ ಕಾರಣ ಆಂಧ್ರ ಪೊಲೀಸರು ಕೊಲೆ ಪ್ರಕರಣವನ್ನು ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಪಾತಪಾಳ್ಯ ಪೊಲೀಸರಿಗೆ ವರ್ಗಾವಣೆ ಮಾಡಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!