Sunday, July 26, 2026
spot_imgspot_img
spot_imgspot_img

ಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್

- Advertisement -
- Advertisement -

ನವದೆಹಲಿ: ಆಂಧ್ರದ ಕರಾವಳಿಗೆ ಅಕ್ಟೋಬರ್ 28ರಂದು ಮೊಂಥಾ ಚಂಡಮಾರುತ ಅಪ್ಪಳಿಸಲಿದ್ದು, ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿನಲ್ಲಿ ರೆಡ್ ಅಲರ್ಟ್​ ಘೋಷಿಸಲಾಗಿದೆ.

ಭೂಕುಸಿತ ಸಂಭವಿಸುವ ಸಾಧ್ಯತೆಗಳಿರುವ ಕಾರಣ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ರೂಪುಗೊಂಡಿದೆ.

ಆಂಧ್ರಪ್ರದೇಶದಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯದ 26 ಜಿಲ್ಲೆಗಳಲ್ಲಿ 23 ಜಿಲ್ಲೆಗಳಿಗೆ ರೆಡ್ ಮತ್ತು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಧಾರಾಕಾರ ಮಳೆ, ಅತಿ ವೇಗದ ಗಾಳಿ ಮತ್ತು ಸಂಭವನೀಯ ಪ್ರವಾಹದ ಬಗ್ಗೆ ಎಚ್ಚರಿಕೆ ನೀಡಲಾಗಿದೆ.

ಒಡಿಶಾ ಸರ್ಕಾರವು ಎಲ್ಲಾ ಶಾಲೆಗಳು, ಅಂಗನವಾಡಿ ಕೇಂದ್ರಗಳು ಮತ್ತು ಕಾಲೇಜುಗಳನ್ನು ಅಕ್ಟೋಬರ್ 30, 2025 ರವರೆಗೆ ಮುಚ್ಚುವುದಾಗಿ ಘೋಷಿಸಿದೆ. ಆಂಧ್ರಪ್ರದೇಶದ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ನಿರ್ದೇಶಿಸಲಾಗಿದೆ. ಕಾಕಿನಾಡ, ಕೋನ ಸೀಮಾ, ಎಲುರು, ಪಶ್ಚಿಮ ಗೋದಾವರಿ, ಕೃಷ್ಣ, ಗುಂಟೂರು, ಬಾಪಟ್ಲಾ, ಪ್ರಕಾಶಂ ಮತ್ತು ಎಸ್‌ಪಿಎಸ್‌ಆರ್ ನೆಲ್ಲೂರು ಸೇರಿದಂತೆ ಜಿಲ್ಲೆಗಳಿಗೆ ಈ ಎಚ್ಚರಿಕೆ ಜಾರಿಯಲ್ಲಿದೆ .ಅಕ್ಟೋಬರ್ 27 ಮತ್ತು 28 ರಂದು ತಮಿಳುನಾಡು ಮತ್ತು ಪುದುಚೇರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಆರೆಂಜ್ ಅಲರ್ಟ್​ ಘೋಷಿಸಿದೆ.

- Advertisement -

Related news

error: Content is protected !!