Sunday, May 5, 2024
spot_imgspot_img
spot_imgspot_img

ಸಿಲಿಂಡರ್ ಸ್ಫೋಟಗೊಂಡು ತಂದೆ ಮಗ ಸಾವು..!

- Advertisement -G L Acharya panikkar
- Advertisement -

ಸಿಲಿಂಡರ್​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಂತೆ ಗಂಭೀರವಾಗಿ ಗಾಯಗೊಂಡಿದ್ದ ತಂದೆ ಹಾಗೂ ಮಗು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೇಗೂರಿನಲ್ಲಿ ನಡೆದಿದೆ.

ಮೃತರನ್ನು ಸಂದೇಶ್ (30) ಹಾಗೂ ರೋಹನ್ (2.5) ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ ಗಾಯಗೊಂಡಿದ್ದ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಗಂಭೀರವಾಗಿ ಗಾಯಗೊಂಡಿದ್ದ ಸಂದೇಶ್​ ಹಾಗೂ ರೋಹನ್​ ಇಬ್ಬರನ್ನು ಮೊದಲಿಗೆ ಸೆಂಟ್​ ಜೋಸೆಫ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೆ ಇಬ್ಬರೂ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್19ರಂದು ಬೇಗೂರು ಠಾಣಾ ವ್ಯಾಪ್ತಿಯ ಗಾರ್ವೆಬಾವಿಪಾಳ್ಯದ ಲಕ್ಷ್ಮೀ ಲೇಔಟ್​​​ನಲ್ಲಿ ಸುಬ್ರಮಣಿ ಎಂಬವರಿಗೆ ಸೇರಿದ ಕಟ್ಟಡದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸಿಲಿಂಡರ್‌ ಸ್ಫೋಟಗೊಂಡು ಒಂದೇ ಕುಟುಂಬದ ಐವರು ಗಾಯಗೊಂಡಿದ್ದರು. ಘಟನೆಯಲ್ಲಿ ಉತ್ತರ ಪ್ರದೇಶ ಮೂಲದ ಸಂದೇಶ್‌(30), ಆತನ ನಾದಿನಿ ನಿಖಿಲಾ(26) ಮತ್ತು ಮೂವರು ಮಕ್ಕಳಾದ ರೋಷಿಣಿ, ರೋಹನ್‌ ಹಾಗೂ ರೋಷನ್‌ ಎಂಬುವರು ಗಾಯಗೊಂಡಿದ್ದರು. ಆದರೆ ಈಗ ಸಂದೇಶ್ ಹಾಗೂ ರೋಹನ್ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!