Friday, April 26, 2024
spot_imgspot_img
spot_imgspot_img

ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸದಸ್ಯರಾಗಿ ರವಿ ಪ್ರಕಾಶ್ ವಿಟ್ಲ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಕ್ಷದ ಕಾರ್ಯಕಾರಿಣಿ ಸದಸ್ಯರಾಗಿ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ರವಿ ಪ್ರಕಾಶ್ ವಿಟ್ಲ ಅವರು ಆಯ್ಕೆಗೊಂಡಿದ್ದಾರೆ.

ತನ್ನ ವಿದ್ಯಾರ್ಥಿ ಜೀವನ ದಲ್ಲೇ ಎ. ಬಿ. ವಿ. ಪಿ ಯಲ್ಲಿ ತೊಡಗಿಸಿಕೊಂಡು ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ನಾಯಕನಾಗಿ ಪ್ರಶಸ್ತಿ ವಿಜೇತ ವಿಟ್ಲ ಯುವಕ ಮಂಡಲ ರಿ. ವಿಟ್ಲ ಇದರ ಅಧ್ಯಕ್ಷ ರಾಗಿ ಸತತ 9 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 2009ರಲ್ಲಿ ಭ. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಕಾಂಗ್ರೆಸ್ ಪ್ರಾಬಲ್ಯ ವಿರುವ ವಾರ್ಡನ್ನು ಬಿಜೆಪಿ ತೆಕ್ಕೆಗೆ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

2015ರಲ್ಲಿ ಪಟ್ಟಣ ಪಂಚಾಯತ್ ಸದಸ್ಯನಾಗಿ, ಪಟ್ಟಣ ಪಂಚಾಯತ್ನ ಪ್ರಥಮ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ, ಧಾರ್ಮಿಕ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು, ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಸಂದರ್ಭದಲ್ಲಿ ಭೋಜನ ವ್ಯವಸ್ಥೆ ಯ ಜವಾಬ್ದಾರಿ ಯನ್ನು ನಿರ್ವಹಿಸಿ ಶಿವಾಜಿ ಮಿತ್ರ ಮಂಡಲ, ಶಿವಾಜಿ ನಗರದವರು ನಡೆಸುವ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆಯ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷ ರಾಗಿ, ವಿಶ್ವ ಹಿಂದೂ ಪರಿಷದ್ ಆಶ್ರಯದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

- Advertisement -

Related news

error: Content is protected !!