Thursday, April 25, 2024
spot_imgspot_img
spot_imgspot_img

ಧರ್ಮಸ್ಥಳ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿಯಲ್ಲಿ.!

- Advertisement -G L Acharya panikkar
- Advertisement -

ಸ್ನಾನಘಟ್ಟದ ಬಳಿ ಭಕ್ತರಿಗೆ ಸಂಪೂರ್ಣ ನಿಷೇಧ

ಮಂಗಳೂರು: ಪಶ್ಚಿಮ ಘಟ್ಟದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಮುಳುಗುವ ಭೀತಿ ಎದುರಾಗಿದೆ.

ನೇತ್ರಾವತಿ ನದಿ ನೀರು ತುಂಬಿ ಹರಿಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಸ್ನಾನಘಟ್ಟದ ಮೇಲ್ಬಾಗದವರೆಗೂ ನೇತ್ರಾವತಿ ನದಿ ನೀರು ಬರುತ್ತಿದೆ. ಅಪಾಯದ ಮಟ್ಟ ಮೀರಿ ನೀರು ಹರಿಯುತ್ತಿರುವುದರಿಂದ ನೇತ್ರಾವತಿ ಸ್ನಾನ ಘಟ್ಟದ ಬಳಿ ಭಕ್ತರಿಗೆ ಸಂಪೂರ್ಣವಾಗಿ ನಿಷೇಧ ಹೇರಲಾಗಿದೆ. ಪಶ್ಚಿಮ ಘಟ್ಟದಲ್ಲಿ ಇದೇ ರೀತಿ ಮಳೆ ಮುಂದುವರೆದರೆ ಸ್ನಾನಘಟ್ಟ ಸಂಪೂರ್ಣವಾಗಿ ಮುಳುಗಡೆಯಾಗುವ ಸಾಧ್ಯತೆ ಇದೆ. ಈ ಕುರಿತು ಮೆಚ್ಚೆಚ್ಚರಿಕೆ ವಹಿಸಲಾಗಿದ್ದು, ಸ್ನಾನ ಘಟ್ಟದ ಬಳಿ ಯಾರನ್ನೂ ಬಿಡಲಾಗುತ್ತಿಲ್ಲ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗಿದೆ. ಚಿಕ್ಕಮಗಳೂರು, ಕೊಡಗು, ಉಡುಪಿ, ಉತ್ತರ ಕನ್ನಡ, ಧಾರವಾಡ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಹಿನ್ನೆಲೆ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಹಿನ್ನೆಲೆ ಮಲೆನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳನ್ನು ರೆಡ್ ಅಲರ್ಟ್ ಎಂದು ಘೋಷಣೆ ಮಾಡಲಾಗಿದೆ.

- Advertisement -

Related news

error: Content is protected !!