Friday, April 26, 2024
spot_imgspot_img
spot_imgspot_img

 *ಧರ್ಮಸ್ಥಳ ಲಕ್ಷ್ಮೀ ಆನೆಯ ಮರಿಗೆ ‘ಶಿವಾನಿ’ ಎಂದು ನಾಮಕರಣ*

- Advertisement -G L Acharya panikkar
- Advertisement -

ಧರ್ಮಸ್ಥಳ:- ಶ್ರೀ ಕ್ಷೇತ್ರ ಧರ್ಮಸ್ಥಳ ದ ಲಕ್ಷ್ಮೀ ಆನೇಯು ದಿನಾಂಕ1/7/2020 ರಂದು ಹೆಣ್ಣು ಮರಿಗೆ ಜನ್ಮ ನೀಡಿದ್ದು, ಈ ಆನೆಯ ಮರಿಯ ನಾಮಕರಣ ಕಾರ್ಯಕ್ರಮ ಇಂದು ಧರ್ಮಸ್ಥಳದ ಅಮೃತವಷೀಣಿ ಸಭಾಭವನದಲ್ಲಿ ತುಲಾ ಲಗ್ನ ಸುಮೂರ್ತದಲ್ಲಿ ನಡೆಯಿತು.

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಮೊಮ್ಮಗಳು ಮಾನ್ಯ, ” ಶಿವಾನಿ ” ಹೆಸರು ಘೋಷಿಸುವ ಮೂಲಕ ನಾಮಕರಣ ಮಾಡಿದರು.

ಶ್ರೀಕ್ಷೇತ್ರದ ಆನೆ ಲಕ್ಷ್ಮೀ ಕಳೆದ ಜುಲೈ1 ರಂದು ಹೆಣ್ಣು ಮರಿಗೆ ಜನ್ಮ ನೀಡಿತ್ತು. ಹೀಗಾಗಿ ಮರಿಯ ನಾಮಕರಣ ಇಂದು ತುಲಾ ಲಗ್ನ ಮುಹೂರ್ತದಲ್ಲಿ ನಡೆಯಿತು. ವೀರೇಂದ್ರ ಹೆಗ್ಗಡೆಯವರು ಆನೆ ಮರಿಗೆ ಶ್ರೀ ದೇವರ ಪ್ರಸಾದ ನೀಡಿ, ಗಂಟೆ ಕಟ್ಟುವ ಮೂಲಕ ವಿಧಿ ನೆರವೇರಿಸಿದರು. ಇದೇ ವೇಳೆ ಆನೆಯ ಮಾವುತ ಕೃಷ್ಣ ಅವರಿಗೆ ಶ್ರೀಧಾಮ ಮಾಣಿಲದ ಮೋಹನದಾಸ ಸ್ವಾಮೀಜಿ ಸನ್ಮಾನ ಮಾಡಿದರು.

ನಾಮಕರಣ ಸಮಾರಂಭದಲ್ಲಿ ಹೇಮಾವತಿ ವಿ ಹೆಗ್ಗಡೆ, ಡಿ ಹರ್ಷೇಂದ್ರ  ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ ಯಶೋವರ್ಮ, ಸೋನಿಯಾ ವರ್ಮಾ, ಅಮಿತ್, ಶ್ರದ್ಧಾ ಅಮಿತ್, ವೀರು ವಿ ಶೆಟ್ಟಿ, ದೇವಳದ ಶ್ರೀ ದೇವಳದ ಪಾರುಪತ್ಯಗಾರ ಪಿ ಲಕ್ಷ್ಮೀನಾರಾಯಣ ರಾವ್ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.

- Advertisement -

Related news

error: Content is protected !!