Sunday, June 29, 2025
spot_imgspot_img
spot_imgspot_img

ದರ್ಶನ್ ನ್ಯಾಯಾಂಗ ಬಂಧನ ಅವಧಿ ಇಂದು ಮುಕ್ತಾಯ : ಜಾಮೀನು ಅರ್ಜಿ ಸಲ್ಲಿಸಲು ದರ್ಶನ್‌ ತಯಾರಿ!

- Advertisement -
- Advertisement -
This image has an empty alt attribute; its file name is hi-tech-1-771x1024.jpeg

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದು ಮುಕ್ತಾಯವಾಗಲಿದೆ. ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ವಿವಿಧ ಜೈಲಲ್ಲಿರುವ ಕಾರಣ ಎಲ್ಲರನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ. ವಿಚಾರಣೆ ಬಳಿಕ ನಟ ದರ್ಶನ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್ ಫಿಟ್ನೆಸ್ ಮೇಂಟೇನ್ ಮಾಡಲು ಒದ್ದಾಡ್ತಿದ್ದಾರೆ. ಜಿಮ್‌ನಲ್ಲಿ ಬೆವರು ಹರಿಸಲು ಅವಕಾಶ ಸಿಗದ ಕಾರಣ ಊಟದ ಮೆನು ಬದಲಿಸಿದ್ದಾರೆ. ಅನ್ನ ಬಿಟ್ಟು ಚಪಾತಿ, ಮುದ್ದೆ ಊಟಕ್ಕೆ ಮೊರೆ ಹೋಗಿದ್ದಾರೆ. ಜೊತೆಗೆ ವಿಟಮಿನ್ ಟ್ಯಾಬ್ಲೆಟ್‌ಗಳನ್ನು ದರ್ಶನ್ ಸೇವಿಸ್ತಿದ್ದಾರೆ. ಇನ್ನು, ದರ್ಶನ್ ಮಾತ್ರವಲ್ಲ ಡಿ ಗ್ಯಾಂಗ್‌ನ ಉಳಿದ ಸದಸ್ಯರು ಜಾಮೀನು ಪಡೆಯಲು ಕಸರತ್ತು ನಡೆಸಿದ್ದಾರೆ. ಎ1 ಪವಿತ್ರಾಗೌಡ, ಎ7 ಅನುಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.

ಈಗಾಗಲೇ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಜೊತೆ ಜಾಮೀನು ಸರ್ಜಿ ಸಲ್ಲಿಕೆ ಮಾಡುವ ಕುರಿತು ದರ್ಶನ್‌ ಚರ್ಚೆ ಮಾಡಿದ್ದಾರೆ. ಆದ್ದರಿಂದ ಸೆ.10ರಂದು ಎಸಿಎಂಎಂ ಕೋರ್ಟ್‌ಗೆ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

- Advertisement -

Related news

error: Content is protected !!