Thursday, April 25, 2024
spot_imgspot_img
spot_imgspot_img

ಕೊರಗಜ್ಜನ ದರ್ಶನ ಪಡೆದ ಚಾಲೆಂಜಿಂಗ್ ಸ್ಟಾರ್.ಸಾಮಾಜಿಕ ತಾಣದಲ್ಲಿ ಪೋಟೋ ವೈರಲ್.!

- Advertisement -G L Acharya panikkar
- Advertisement -

ಮಂಗಳೂರು: ತುಳುನಾಡಿನ ಅತ್ಯಂತ ಕಾರ್ಣಿಕ ಹಾಗೂ ಪ್ರಸಿದ್ಧ ದೈವಗಳಲ್ಲಿ ಒಂದಾದ ಕೊರಗಜ್ಜನ ದರ್ಶನವನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಪಡೆದ ಪೋಟೋ ಸಾಮಾಜಿಕ ತಾಣದಲ್ಲಿ ವೈರಲ್ ಆಗುತ್ತಿದೆ.

ಕೆಲ ತಿಂಗಳ ಹಿಂದೆ ಮಂಗಳೂರಿಗೆ ಭೇಟಿ ಮಾಡಿದ್ದ ಡಿ.ಬಾಸ್, ಕೊರಗಜ್ಜನ ಗುಡಿಗೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವರ ಮುಂದೆ ಕೈ ಮುಗಿಯುತ್ತಾ ನಿಂತಿರುವ ದರ್ಶನ್ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

ಹೀಗೆ ಕ್ಷೇತ್ರ ಭೇಟಿಯಲ್ಲಿದ್ದ ದರ್ಶನ್ ತನ್ನ ಸ್ನೇಹಿತರೊಂದಿಗೆ ಮಂಗಳೂರಿಗೆ ಕೂಡ ಭೇಟಿ ಕೊಟ್ಟರು. ಮೊದಲೇ ತಮ್ಮ ಸ್ನೇಹಿತರ ಮೂಲಕ ಕೊರಗಜ್ಜನ ಪವಾಡ ಅರಿತಿದ್ದ ಚಾಲೆಂಜಿಂಗ್ ಸ್ಟಾರ್, ಇದೇ ಸಂದರ್ಭದಲ್ಲಿ ಕೊರಗಜ್ಜನ ಕ್ಷೇತ್ರಕ್ಕೆ ತೆರಳಿ ಅಜ್ಜನ ಮುಂದೆ ತಮ್ಮ ಕೋರಿಕೆಯನ್ನು ಇರಿಸಿದ್ದರು. ಸೆಲೆಬ್ರಿಟಿಗಳು ಸೇರಿದಂತೆ ವಿಶ್ವದೆಲ್ಲೆಡೆ ನೆಲೆಸಿರುವ ತುಳುನಾಡಿನ ಮಂದಿಯ ಆರಾಧ್ಯ ದೈವ ಕೊರಗಜ್ಜನ ಆಶೀರ್ವಾದ ಪಡೆದಿರುವುದು ದರ್ಶನ್ ಅಭಿಮಾನಿಗಳಲ್ಲಿ ಹಾಗೂ ಕರಾವಳಿ ಜನರಲ್ಲಿ ಸಂತಸ ತಂದಿದೆ.

- Advertisement -

Related news

error: Content is protected !!