Tuesday, July 1, 2025
spot_imgspot_img
spot_imgspot_img

ಕಾರು ಪಲ್ಟಿ; ಎಂಬಿಬಿಎಸ್ ವಿದ್ಯಾರ್ಥಿ ಮೃತ್ಯು…!

- Advertisement -
- Advertisement -

ಕಾರೊಂದು ರಸ್ತೆ ಪಕ್ಕ ಪಲ್ಟಿಯಾಗಿದ ಘಟನೆ ಧಾರವಾಡ ಹೊರವಲಯದ ಮುಮ್ಮಿಗಟ್ಟಿ ಗ್ರಾಮದ ಬಳಿ ನಡೆದಿದೆ. ಪರಿಣಾಮ ಕಾರಿನಲ್ಲಿದ್ದ ದೀಪಕ್ (30) ಎಂಬ ಎಂಬಿಬಿಎಸ್ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ ಮತ್ತೋರ್ವ ಗಂಭೀರ ಗಾಯಗೊಂಡಿದ್ದಾನೆ.

ಮುಮ್ಮಿಗಟ್ಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ತಿರುವು ಕೊಡಲಾಗಿತ್ತು. ತಿರುವು ಕೊಟ್ಟಿರುವುದು ಕಾಣದ ಹಿನ್ನೆಲೆಯಲ್ಲಿ ಕಾರು ಪಲ್ಟಿಯಾಗಿದೆ. ರಸ್ತೆ ತಿರುವಿನಲ್ಲಿ ಕಾರು ಸರ್ವಿಸ್ ರಸ್ತೆಗೆ ತೆಗೆದುಕೊಳ್ಳಲು ಹೋಗಿ ಪಲ್ಟಿಯಾಗಿದೆ. ಈ ವೇಳೆ ಗಂಭೀರ ಗಾಯಗೊಂಡಿದ್ದ ದೀಪಕ್ ಸಾವನ್ನಪ್ಪಿದ್ದಾನೆ.

ದೀಪಕ್ ಮೂಲತಃ ಯಾದಗಿರಿ‌ ಜಿಲ್ಲೆಯ‌ ವಿದ್ಯಾರ್ಥಿ. ಧಾರವಾಡ ಎಸ್​​ಡಿಎಂ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದನು. ಕಾರಿನಲ್ಲಿದ್ದ ಮತ್ತೋರ್ವ ವಿನಯ ಎಂಬ ಯುವಕನಿಗೆ‌ ಕೂಡಾ ಗಂಭೀರ ಗಾಯವಾಗಿದೆ. ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡದ‌ ಗರಗ ಪೊಲೀಸ್ ಠಾಣಾ‌ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!