Friday, April 19, 2024
spot_imgspot_img
spot_imgspot_img

ಶಿಕ್ಷಕರಿಗೆ ಮಧ್ಯಂತರ ರಜೆ ಘೋಷಣೆ!!

- Advertisement -G L Acharya panikkar
- Advertisement -

ಬೆಂಗಳೂರು: ಕೊರೂನ ಮಹಾಮಾರಿ ಎಲ್ಲೆಡೆಯಲ್ಲೂ ನಿರಂತರವಾಗಿ ವ್ಯಾಪಿಸುತ್ತಿದೆ.ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾಗಮ ಯೋಜನೆ ಯನ್ನು ಅನುಷ್ಠಾನಗೊಳಿಸಿತ್ತು.ಆದರೆ ವಿಪರ್ಯಾಸವೆಂದರೆ ಇದರ ಮೂಲಕವೇ ಹಲವಾರು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಈ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಳ್ಳಬೇಕಾದ ಪರಿಸ್ಥಿತಿ ಬಂದಿತು.

ಈಗ ತಾತ್ಕಾಲಿಕವಾಗಿ ಈ ಯೋಜನೆ ಸ್ಥಗಿತಗೊಂಡಿದೆ.
ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಆರೋಗ್ಯದ ಹಿತದೃಷ್ಟಿಯಿಂದ ಅಕ್ಟೋಬರ್ 30ರವರೆಗೆ ರಜೆ ನೀಡಬೇಕಾಗಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿತ್ತು.

ಈ ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ನಾಳೆಯಿಂದ ಅಕ್ಟೋಬರ್ 30ರವರೆಗೆ ಶಿಕ್ಷಕರಿಗೆ ಮಧ್ಯಂತರ ರಜೆಯನ್ನು ಘೋಷಿಸಿದ್ದಾರೆ.

- Advertisement -

Related news

error: Content is protected !!