Thursday, May 2, 2024
spot_imgspot_img
spot_imgspot_img

ವಿಟ್ಲ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಮೇಲೆ ಅನ್ಯಕೋಮಿನ ತಂಡದಿಂದ ಹಲ್ಲೆ – ಬಿಜೆಪಿ ಮುಖಂಡ ದಯಾನಂದ ಶೆಟ್ಟಿ ಉಜಿರೆಮಾರ್ ಖಂಡನೆ

- Advertisement -G L Acharya panikkar
- Advertisement -

ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಮುಖಂಡ ದಯಾನಂದ ಶೆಟ್ಟಿ ಉಜಿರೆಮಾರ್ ಖಂಡನೆ

ಹಿಂದೂಗಳನ್ನು ಕೆಣಕುವ ಪ್ರಯತ್ನ ಮಾಡಿದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ

ವಿಟ್ಲ: ಗ್ಯಾಸ್ ಹಾಕಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವರಿಗೆ ಅನ್ಯಕೋಮಿನ ವ್ಯಕ್ತಿ ಸಮದ್‌ ತಂಡದೊಂದಿಗೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಹಲ್ಲೆಗೊಳಗಾದ ಗ್ಯಾಸ್‌ ಏಜೆನ್ಸಿ ಆಸ್ಪತ್ರೆಗೆ ದಾಖಲಾಗಿದ್ದು, ಬಿಜೆಪಿ ಮುಖಂಡ ದಯಾನಂದ ಶೆಟ್ಟಿ ಉಜಿರೆಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಸರ್ಕಾರ ಬದಲಾಗಿರಬಹುದು ಹಿಂದುತ್ವ ಬದಲಾಗಲ್ಲ, ಹಾಗಂತ ಅನ್ಯಮತೀಯರು ಹಿಂದೂಗಳ ಮೇಲೆ ದೌರ್ಜನ್ಯ ನಡೆಸಿದರೆ ಮುಂದೆ ಹಿಂದೂ ಸಮಾಜ ಉತ್ತರ ಕೊಡಬೇಕಾದಿತು ಎಂದು ಬಿಜೆಪಿ ಮುಖಂಡ ದಯಾನಂದ ಶೆಟ್ಟಿ ಉಜಿರೆಮಾರ್‌ ಎಚ್ಚರಿಕೆ ನೀಡಿದರು.

ಗ್ಯಾಸ್‌ ಏಜೆನ್ಸಿಯಲ್ಲಿ ಹೊಟ್ಟೆಪಾಡಿಗಾಗಿ ಕೆಲಸ ಮಾಡುವ ಸಿಬ್ಬಂದಿಗಳ ಮೇಲೆ ಇಂದು ಮುಸ್ಲಿಂ ಸಮುದಾಯದ ತಂಡವೊಂದು ಹಲ್ಲೆ ಮಾಡಿದ ಘಟನೆಯನ್ನು ಖಂಡಿಸಿದ ಉಜಿರೆಮಾರ್‌ ಅವರು ಸರ್ಕಾರ ಇಲ್ಲ ಎಂದು ಹಿಂದೂಗಳನ್ನು ಮುಟ್ಟಿ ನೋಡುವ ಕೆಲಸಕ್ಕೆ ಕೈ ಹಾಕಬೇಡಿ. ಹಿಂದೂ ಸಮಾಜ ಜಾಗೃತವಾಗಿದೆ. ಹಿಂದೂಗಳ ತಂಟೆಗೆ ಬಂದರೆ ಮುಂದಿನ ದಿನಗಳಲ್ಲಿ ತಕ್ಕ ಪಾಠವನ್ನು ಕಲಿಸುತ್ತೇವೆ ಎಂದು ಮಾಧ್ಯಮಕ್ಕೆ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ವಿಟ್ಲಮುಡ್ನೂರು ಗ್ರಾ.ಪಂ ಸದಸ್ಯ ಉಮೇಶ್‌ ಗೌಡ ಮತ್ತು ಹಿಂದೂ ಮುಖಂಡರುಗಳು ಸದಾನಂದ ಅವರ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

- Advertisement -

Related news

error: Content is protected !!