Sunday, June 29, 2025
spot_imgspot_img
spot_imgspot_img

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರ್‌ ಆಯ್ಕೆ

- Advertisement -
- Advertisement -

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರ್‌ ಆಯ್ಕೆಯಾಗಿದ್ದಾರೆ.

ಈ ಹಿಂದೆ ಬಿಜೆಪಿ ಪುಣಚ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಲ್ಲಿ ಜವಬ್ದಾರಿ ನಿಭಾಯಿಸಿದ ಇವರು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಗುರುತಿಸಿಕೊಂಡವರು. ಹಲವು ಸಮಾಜ ಸೇವೆ, ರಾಷ್ಟ್ರಾಭಿಮಾನ ಕಾರ್ಯಗಳಲ್ಲಿ ತೊಡಗಿಸಿಕೊಂಡ ಇವರು ಪಕ್ಷ ನಿಷ್ಠೆಯಿಂದ ಪಕ್ಷಕ್ಕಾಗಿ ಹಗಲಿರುಳು ದುಡಿದವರು. ಹಲವು ಧಾರ್ಮಿಕ ಕ್ಷೇತ್ರದ ಮುಂದಾಳತ್ವವನ್ನು ವಹಿಸಿಕೊಂಡು ಧಾರ್ಮಿಕ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದವರು. ಇದೀಗ ಭಾರತೀಯ ಜನತಾ ಪಾರ್ಟಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಿಗೆ ಮಣೆ ಹಾಕಿದ್ದು, ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರ್‌ ಆಯ್ಕೆಯಾಗಿದ್ದಾರೆ.

- Advertisement -

Related news

error: Content is protected !!