- Advertisement -
- Advertisement -
ಮಂಗಳೂರು: ಲಾಕ್ ಡೌನ್ ಕುರಿತಂತೆ ಜಿಲ್ಲೆಯಲ್ಲಿ ಈಗಿರುವ ನಿಯಮಗಳನ್ನು ಇನ್ನಷ್ಟು ಬಿಗಿಗೊಳಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರವರು ಹೇಳಿದರು.
ಜೂನ್ 7ರಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಅನ್ ಲಾಕ್ ಮಾಡಬೇಕಾದರೆ ಪಾಸಿಟಿವಿಟಿ ದರ ಕಡಿಮೆ ಮಾಡುವ ಅಗತ್ಯವಿದೆ.
ಹಾಗಾಗಿ ಮುಂದಿನ 1 ವಾರ ಕಾಲ ಜನರ ಅನಗತ್ಯ ಸಂಚಾರವನ್ನು ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಈ ನಿಟ್ಟಿನಲ್ಲಿ ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ 10 ತಂಡ ಸೇರಿದಂತೆ ಜಿಲ್ಲಾದ್ಯಂತ 150 ತಪಾಸಣಾ ತಂಡಗಳನ್ನು ರಚನೆ ಮಾಡಲಾಗಿದೆ. ಇದಕ್ಕೆ ಜನರು ಸಹಕಾರ ನೀಡಬೇಕು ಎಂದರು.
- Advertisement -