- Advertisement -
- Advertisement -
ಮಂಗಳೂರು: ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತಿನಿತ್ಯ ಬಂದು ಹೋಗುವವರಿಗೆ ಕೋವಿಡ್ ನೆಗೆಟಿವ್ ವರದಿ ಅಗತ್ಯವಿಲ್ಲ, ಅವರು ಆರೋಗ್ಯ ಸೇತು ಆಪ್ ಹೊಂದಿರುವುದು ಕಡ್ಡಾಯ. ಕೇರಳದಿಂದ ಬಂದು ದ.ಕ.ದಲ್ಲಿ ವಾಸ್ತವ್ಯ ಹೂಡುವವರು ಕೋವಿಡ್ ನೆಗೆಟಿವ್ ವರದಿ ಹೊಂದಿರಬೇಕು.
ಈ ಕುರಿತು ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವಥ್ನಾರಾಯಣ್ ಅವರು ತಿಳಿಸಿದ್ದಾರೆ.
ಕೇರಳದಿಂದ ಮಂಗಳೂರಿಗೆ ಶಾಲಾ- ಕಾಲೇಜು, ಅಸ್ಪತ್ರೆ, ವ್ಯವಹಾರ ನಿಮಿತ್ತ ಪ್ರತಿದಿನ ಬಂದು ಹೋಗುವವರು ಕೊರೋನಾ ನೆಗೆಟಿವ್ ವರದಿ ಪಡೆದುಕೊಳ್ಳುವ ಅಗತ್ಯವಿಲ್ಲ. ಆದರೆ, ಕೋವಿಡ್ಗೆ ಸಂಬಂಧಿಸಿ ಮುನ್ನೆಚ್ಚರಿಕಾ ಕ್ರಮ ವಹಿಸುವುದು, ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವುದು ಅಗತ್ಯ. ಈ ಮೂಲಕ ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಕೇರಳದಿಂದ ಬರುವವರಿಗೆ ಗಡಿ ನಿರ್ಬಂಧ ಆದೇಶದಿಂದ ಸಡಿಲಿಕೆ ನೀಡುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
- Advertisement -