Sunday, June 29, 2025
spot_imgspot_img
spot_imgspot_img

ರೆಸಾರ್ಟ್ ನಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆ

- Advertisement -
- Advertisement -

ರೆಸಾರ್ಟ್ ವೊಂದರಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆಯಾದ ಘಟನೆ ಮಡಿಕೇರಿ ತಾಲೂಕಿನ ಕಗ್ಗೋಡ್ಲು ಗ್ರಾಮದ ರೆಸಾರ್ಟ್ ವೊಂದರಲ್ಲಿ ನಡೆದಿದೆ.

ರೆಸಾರ್ಟ್ ನ ಕೋಣೆಯಲ್ಲಿ ಪತಿ, ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಮಗುವಿನ ಮೃತದೇಹ ಹಾಸಿಗೆಯಲ್ಲಿದೆ. ಕೇರಳ ರಾಜ್ಯದ ಕೊಟ್ಟಾಯಂ ಬಳಿಯ ಪಡಿಚಾಟು ಗ್ರಾಮದ ವಿನೋದ್ (37) ಹಾಗೂ ಅವರ ಪತ್ನಿ, ಮಗು ಮೃತಪಟ್ಟಿದ್ದಾರೆ. ಮಗುವನ್ನು ಕೊಂದು ದಂಪತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಶುಕ್ರವಾರ ಸಂಜೆ ಪ್ರವಾಸಕ್ಕೆಂದು ಕೊಡಗಿಗೆ ಬಂದವರು ರೆಸಾರ್ಟ್ ನಲ್ಲಿ ತಂಗಿದ್ದರು ಎಂದು ಹೇಳಲಾಗಿದೆ.
ಕೇರಳದಿಂದ ಕುಟುಂಬದ ಸದಸ್ಯರು ಬಂದ ನಂತರವಷ್ಟೇ ಹೆಚ್ಚಿನ ಮಾಹಿತಿ ತಿಳಿಯಲಿದೆ. ಸ್ಥಳಕ್ಕೆ ಮಡಿಕೇರಿ ಗಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

- Advertisement -

Related news

error: Content is protected !!