Monday, June 8, 2026
spot_imgspot_img
spot_imgspot_img

ಪುತ್ತೂರು : ಬಸ್‌ ನಿಲ್ದಾಣದಲ್ಲಿ ಯುವಕನ ಮೃತದೇಹ ಪತ್ತೆ

- Advertisement -
- Advertisement -

ಪುತ್ತೂರು : ಬಸ್‌ ನಿಲ್ದಾಣದಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾದ ಘಟನೆ ನಡೆದಿದೆ.

ಮೃತ ಯುವಕನ್ನು ಕುದ್ದುಪದವು ನಿವಾಸಿ ಚಂದ್ರಶೇಖರ ಎಂದು ಗುರುತಿಸಲಾಗಿದೆ.

ಪುತ್ತೂರಿನ ಮಹಮ್ಮಾಯಿ ದೇವಸ್ಥಾನದ ಬಳಿ ಇರುವ ಬಸ್ಸು ನಿಲ್ದಾಣದಲ್ಲಿ ಮಲಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಪುತ್ತೂರು ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಮೃತದೇಹ ಇರುವುದಾಗಿ ಪುತ್ತೂರು ನಗರ ಠಾಣಾ ಪೊಲೀಸರು ತಿಳಿಸಿದ್ದಾರೆ.

ಮೃತ ಚಂದ್ರಶೇಖರನು ವಿಟ್ಲದ ವೈನ್‌ಶಾಪ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಹತ್ತು ದಿನಗಳ ಹಿಂದೆ ಕೆಲಸ ಬಿಟ್ಟಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!