- Advertisement -
- Advertisement -
ಮಂಗಳೂರು: 45 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ನಗರದ ರಾವ್& ರಾವ್ ಸರ್ಕಲ್ ಬಳಿ ಇರುವ ಸ್ಟಾರ್ ಕಟ್ಟಡದ ನೆಲ ಮಹಡಿಯಲ್ಲಿ ಪತ್ತೆಯಾಗಿದ್ದು, ಇದೊಂದು ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಪುತ್ತೂರು: ಕೇಶವ ನಾಯ್ಕ್ ಎಂಬವರ ಮೃತದೇಹ ಮಹಾಲಿಂಗೇಶ್ವರ ದೇವಳದಲ್ಲಿನ ಪಂಚಾಕ್ಷರಿ ಮಂಟಪದಲ್ಲಿ ಪತ್ತೆ!
ವ್ಯಕ್ತಿ ಮೃತಪಟ್ಟು ಸುಮಾರು 3-4 ದಿನಗಳು ಕಳೆದಿದ್ದು, ಮೃತದೇಹ ಕೊಳೆತ ಸ್ಥಿತಿಯಲ್ಲಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಮೃತದೇಹದ ಗುರುತು ಪರಿಚಯ ಪತ್ತೆಯಾಗಿಲ್ಲ. ಪೊಲೀಸರ ತನಿಖೆಯಿಂದಷ್ಟೇ ಮಾಹಿತಿ ತಿಳಿದು ಬರಬೇಕಾಗಿದೆ. ಬಂದರು ಪೊಲೀಸರ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -