![G L Acharya G L Acharya](https://vtvvitla.com/wp-content/uploads/2023/07/gl_acharya.jpeg)
![panikkar panikkar](https://vtvvitla.com/wp-content/uploads/2020/07/panikkar.jpeg)
![](https://vtvvitla.com/wp-content/uploads/2021/10/indane-gas-1024x606.jpg)
![](https://vtvvitla.com/wp-content/uploads/2024/04/vigneshwara-new-683x1024.jpeg)
ಬಂಟ್ವಾಳ : ಬಕ್ರೀದ್ ದಿನ ಸಂಜೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಮೃತದೇಹ ಬಿ ಸಿ ರೋಡು ಸಮೀಪದ ತಲಪಾಡಿ-ಕೆಇಬಿ ಸಬ್ ಸ್ಟೇಷನ್ ಬಳಿ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ.
ಬಿ ಸಿ ರೋಡು ಸಮೀಪದ ಕೈಕಂಬ ನಿವಾಸಿ ಕರೀಂ (61) ಮೃತ ವ್ಯಕ್ತಿ.
ಬಕ್ರೀದ್ ದಿನವಾದ ಸೋಮವಾರ ಸಂಜೆ ಮನೆಯಿಂದ ಹೊರಟ ಕರೀಂ ಅವರು ಬಳಿಕ ವಾಪಾಸು ಬಂದಿರಲಿಲ್ಲ. ಈ ಬಗ್ಗೆ ಮನೆ ಮಂದಿ ಸಹಿತ ಊರ ನಾಗರಿಕರು ಹುಡುಕಾಟ ನಡೆಸಿದ್ದರು. ಇವರ ಪತ್ತೆಗಾಗಿ ಸಾಮಾಜಿಕ ಜಾಲ ತಾಣಗಳಲ್ಲೂ ಭಾವಚಿತ್ರ ಸಹಿತ ವಿವರವಾದ ಮನವಿಯನ್ನೂ ಮಾಡಲಾಗಿತ್ತು. ಆದರೆ ಇವರ ಪತ್ತೆಯಾಗಿರಲಿಲ್ಲ. ನಂತರ ತಲಪಾಡಿ ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮಾನಸಿಕವಾಗಿ ಸ್ವಲ್ಪ ಖಿನ್ನತೆಯಿಂದ ಇದ್ದ ಇವರು ಅದೇ ಕಾರಣಕ್ಕಾಗಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.