Friday, March 29, 2024
spot_imgspot_img
spot_imgspot_img

ನಾಪತ್ತೆಯಾಗಿದ್ದ ಕನ್ಯಾನ ವ್ಯಕ್ತಿಯ ಮೃತದೇಹ ಹೊಳೆಯಲ್ಲಿ ಪತ್ತೆ

- Advertisement -G L Acharya panikkar
- Advertisement -

ವಿಟ್ಲ: ಮಕ್ಕಳಿಗೆ ತಿಂಡಿ ತರಲೆಂದು ಪೇಟೆ ಗೆ ಹೋಗಿ ನಾಪತ್ತೆಯಾಗಿದ್ದ ಕನ್ಯಾನ ಗ್ರಾಮದ ನಂದರಬೆಟ್ಟು ನಿವಾಸಿ ಸತೀಶ್ (44) ಅವರ ಮೃತದೇಹ ಪೆರುವಾಯಿಯ ನೆಕ್ಕರೆ ತೋಡಿನಲ್ಲಿ ಹೊಳೆಯಲ್ಲಿ ಪತ್ತೆಯಾಗಿದೆ.

ಸತೀಶ್ ಅವರು ಬಂಟ್ವಾಳದಲ್ಲಿ ಭತ್ತ ಕೊಯಿಲು ಮತ್ತು ಕಟಾವು ಮಾಡುವ ಕೆಲಸ ಮಾಡುತ್ತಿದ್ದು, ಆದಿತ್ಯವಾರ ಕೆಲಸ ಮುಗಿಸಿಕೊಂಡು ಮನೆಯ ಕಡೆ ಬಂದಿದ್ದರು.
ಬಳಿಕ ಅಕ್ಕನ ಮಕ್ಕಳಿಗೆ ತಿಂಡಿ ತರಲೆಂದು ಸಮೀಪದ ಅಂಗಡಿಗೆಂದು ತೆರಳಿದವರು ವಾಪಾಸು ಮನೆಗೆ ಬರದೆ ಕಾಣೆಯಾಗಿದ್ದಾರೆ ಎಂದು ತಮ್ಮ ಆಶೋಕ್ ದೂರು ನೀಡಿದ್ದರು.


ನಂದರಬೆಟ್ಟು ಎಂಬಲ್ಲಿ ನ ತೋಡಿನ ಸಮೀಪದ ಗಿಡದ ಮೊದೆಯ ಮಧ್ಯೆ ಸತೀಶ್ ಅವರು ಧರಿಸಿದ ವೇಸ್ಟಿ ಹಾಗೂ ಕೊಡೆ ಕಂಡುಬಂದಿದ್ದು ಇವರು ಆಕಸ್ಮಿಕ ವಾಗಿ ಕಾಲು ಜಾರಿ ತೋಡಿ ಗೆ ಬಿದ್ದು ನಾಪತ್ತೆಯಾಗಿರಬೇಕು ಎಂಬ ಸಂಶಯ ಮನೆಯವರು ವ್ಯಕ್ತ ಪಡಿಸಿದ್ದರು.
ಇದೀಗ ಅವರ ಮೃತದೇಹ ನೆಕ್ಕರೆ ಹೊಳೆಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!