Saturday, May 4, 2024
spot_imgspot_img
spot_imgspot_img

ಉಡುಪಿ : ಅಪರಿಚಿತ ವ್ಯಕ್ತಿಯ ಶವ ಪತ್ತೆ : ಕೊಲೆ ಶಂಕೆ

- Advertisement -G L Acharya panikkar
- Advertisement -

ಉಡುಪಿ : ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಉಡುಪಿಯ ಕರಾವಳಿ ಹೊಟೇಲಿನ ವಠಾರದಲ್ಲಿ ಪತ್ತೆಯಾಗಿದ್ದು ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ.

ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯವಿಜ್ಞಾನ ಪ್ರಯೋಗಾಲಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈಕಡಿದಿದ್ದು ತೀವ್ರ ರಕ್ತಸ್ರಾವವೇ ಸಾವಿಗೆ ಕಾರಣವಿರಬಹುದು ಎಂದು ಮೇಲ್ನೋಟಕ್ಕೆ ಕಂಡುಬಂದಿದೆ.

ಉಡುಪಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಸಮಾಜಸೇವಕ ವಿಶು ಶೆಟ್ಟಿ ಕೆಎಂಸಿ ಶವಾಗಾರದಲ್ಲಿ ಶವ ಇಡಲು ಪೊಲೀಸರಿಗೆ ಸಹಕರಿಸಿದ್ದಾರೆ. ಸಂಬಂಧಿಕರು ಅಥವಾ ಸಂಬಂಧಪಟ್ಟವರು ಉಡುಪಿ ಠಾಣೆಗೆ ಸಂಪರ್ಕಿಸುವಂತೆ ವಿನಂತಿಸಲಾಗಿದೆ.

- Advertisement -

Related news

error: Content is protected !!