Sunday, June 29, 2025
spot_imgspot_img
spot_imgspot_img

ಕಾಣೆಯಾಗಿದ್ದ ಲಾಯರ್ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

- Advertisement -
- Advertisement -
This image has an empty alt attribute; its file name is ad-2-2.jpg

ಕಾಣೆಯಾಗಿದ್ದ ಲಾಯರ್ ಕೊಲೆಯಾಗಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ಬಾಗಲಕೋಟೆಯ ತುಮ್ಮರಮಟ್ಟಿ ಗ್ರಾಮದಲ್ಲಿ ನಡೆದಿದೆ.

ಗಿರೀಶ್ ಕಾಡಣ್ಣವರ (38) ಕೊಲೆಯಾದ ಲಾಯರ್. ಬೀಳಗಿ ತಾಲೂಕು ನ್ಯಾಯಾಲಯದಲ್ಲಿ ವಕೀಲ ವೃತ್ತಿ ಮಾಡುತ್ತಿದ್ದ ಗಿರೀಶ್ ಅಕ್ಟೋಬರ್ 15ರಂದು ಮನೆಯಿಂದ ನಾಪತ್ತೆಯಾಗಿದ್ದರು. ಗ್ರಾಮದ ವಾರಿ ಮಲ್ಲಯ್ಯನ ಗುಡಿ ಬೆಟ್ಟದ ಮೇಲೆ ಇವರ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅಪರಿಚಿತರು ಇವರ ತಲೆ ಮತ್ತು ದೇಹವನ್ನು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿದ್ದು, ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಕೊಲೆ ಮಾಡಿದ್ದು ಯಾರು? ಹತ್ಯೆ ಮಾಡಲು ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಬೀಳಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!