- Advertisement -
- Advertisement -






ಶಿವಮೊಗ್ಗ: ಟಿವಿ ರಿಮೋಟ್ ಕೊಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಸೂಳೆಬೈಲಿನಲ್ಲಿ ನಡೆದಿದೆ.ಮೃತ ಬಾಲಕಿಯನ್ನು ಭದ್ರಾವತಿ ತಾಲೂಕಿನ ಕಲ್ಲಿಹಾಳ್ ಗ್ರಾಮದ ಸಹನಾ (16) ಎಂದು ಗುರುತಿಸಲಾಗಿದೆ.ಟಿವಿ ರಿಮೋಟ್ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -