- Advertisement -
- Advertisement -
![](https://vtvvitla.com/wp-content/uploads/2024/09/mk-panikar-1024x767.jpeg)
![](https://vtvvitla.com/wp-content/uploads/2022/01/indane-gas-2-1024x748.jpg)
![](https://vtvvitla.com/wp-content/uploads/2024/11/bharath.jpg)
![](https://vtvvitla.com/wp-content/uploads/2024/12/solar-shree-energy-667x1024.jpeg)
ಉಪ್ಪಿನಂಗಡಿ: ಹೊಸ ಬಸ್ ನಿಲ್ದಾಣದ ಹಿಂಬದಿಯಲ್ಲಿರುವ ನಿರ್ಮಾಣ ಹಂತದ ಗ್ರಂಥಾಲಯ ಕಟ್ಟಡದ ಮೊದಲ ಮಹಡಿಯ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯ ಮೃತದೇಹ ಬುಧವಾರ ಬೆಳಿಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.
ಮೃತ ವ್ಯಕ್ತಿಯನ್ನು ಅಸ್ಸಾಂ ಮೂಲದ ಸುಮಾರು 30-35 ವರ್ಷ ಪ್ರಾಯದ ದೀಪಕ್ ಎಂದು ಗುರುತಿಸಲಾಗಿದೆ. ಮೃತದೇಹದ ಹಣೆ ಮತ್ತು ತಲೆಯಲ್ಲಿ ರಕ್ತದ ಗಾಯಗಳು ಕಂಡು ಬಂದಿರುವ ಹಿನ್ನಲೆಯಲ್ಲಿ ಕೊಲೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಉಪ್ಪಿನಂಗಡಿ ಗ್ರಾಮ ಪಂಚಾಯತ್ ಗ್ರೇಡ್-1 ಕಾರ್ಯದರ್ಶಿ ಶ್ರೀಮತಿ ಗೀತಾ ಬಿ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
- Advertisement -