- Advertisement -
- Advertisement -
ಆಟವಾಡುತ್ತಿದ್ದ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ನಡೆದಿದೆ. ಋತ್ವಿಕ್ (10 ವರ್ಷ) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ.
ಮನೆ ಸಮೀಪ ಆಟ ಆಡುತ್ತಿದ್ದ ಋತ್ವಿಕ್ ಸಮೀಪದಲ್ಲಿದ್ದ ವಿದ್ಯುತ್ ತಂತಿಯನ್ನು ಮೆಟ್ಟಿದ್ದು, ಆಗ ವಿದ್ಯುತ್ ಪ್ರವಹಿಸಿ ದುರಂತ ಸಂಭವಿಸಿದೆ ಎನ್ನಲಾಗಿದೆ.ವಿದ್ಯುತ್ ಹರಿಯುವ ತಂತಿಗಳನ್ನು ಮಕ್ಕಳು ಆಡುವ ಜಾಗದಲ್ಲಿ ಬಿಟ್ಟಿದ್ದೇ ದುರಂತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -