Saturday, August 8, 2026
spot_imgspot_img
spot_imgspot_img

ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ವಿಧಿವಶ

- Advertisement -
- Advertisement -

ಬೆಂಗಳೂರು: ಮಾಜಿ ಸಿಎಂ ಎಸ್‌ಎಂ ಕೃಷ್ಣ ಬೆಳಗಿನ ಜಾವ ಸುಮಾರು 2.45ಕ್ಕೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿಗಳು ಚಿಕಿತ್ಸೆ ಪಡೆದು ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ ಎಸ್‌ಎಂ ಕೃಷ್ಣ ನಿಧನರಾಗಿದ್ದಾರೆ.

ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ. ಎಸ್‌ಎಂ ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು.

- Advertisement -

Related news

error: Content is protected !!