Monday, May 6, 2024
spot_imgspot_img
spot_imgspot_img

ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು ಮಗು ಗಂಭೀರ

- Advertisement -G L Acharya panikkar
- Advertisement -

ಬೆಂಗಳೂರು: ಭಾರಿ ಮಳೆಗೆ ಮರವೊಂದು ಧರೆಗುರುಳಿ ವಾಕ್‌ ಮಾಡುತ್ತಿದ್ದ ತಾಯಿ ಮೃತಪಟ್ಟಿದ್ದು ಮತ್ತು ಮಗುವನ್ನು ಗಂಭೀರ ಗಾಯಗೊಂಡ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ದುರ್ಘಟನೆ ಸಂಭವಿಸಿದೆ.

ಮೃತಪಟ್ಟವರನ್ನು ವಿಲ್ಸನ್‌ ಗಾರ್ಡನ್‌ ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹೇಮಾವತಿ ಮತ್ತು ಮಗಳು ರಚಿತಾ ಮನೆಯ ಮುಂದೆ ಪುಟ್ ಪಾತ್ ಮೇಲೆ ತಾಯಿ ಮಗಳು ವಾಕ್ ಮಾಡುತ್ತಿದ್ದಾಗ ಬೃಹತ್ ಮರ ಉರುಳಿದೆ. ಒಂದು ಕಡೆ ಮರದ ಕೊಂಬೆ ಇನ್ನೊಂದು ಕಡೆ ವಿದ್ಯುತ್‌ ಕಂಬವೂ ಅವರ ಮೇಲೆ ಬಿದ್ದಿದೆ. ಕೂಡಲೇ ಹೇಮಾವತಿ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಒಯ್ಯಲಾಯಿತು. ರಚಿತಾಗೆ ತಲೆಗೆ ಗಾಯವಾಗಿದ್ದು ನಿಮಾನ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಯಿತು.
ಈ ನಡುವೆ, ಚಿಕಿತ್ಸೆ ಫಲಕಾರಿಯಾಗದೇ ತಾಯಿ ಹೇಮಾವತಿ ನಿಧನರಾಗಿದ್ದಾರೆ. ಅವರು ಸಂಜಯಗಾಂಧಿ ಆಸ್ಪತ್ರೆಯಲ್ಲಿ‌ ಕೊನೆಯುಸಿರೆಳೆದರು. ಮರಣೋತ್ತರ ಪರೀಕ್ಷೆ ನಂತರ ಮೃತದೇಹ ಕುಟುಂಬಕ್ಕೆ ಹಸ್ತಾಂತರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!