Monday, April 29, 2024
spot_imgspot_img
spot_imgspot_img

ಮೂಡುಬಿದಿರೆ: ಹೃದಯಾಘಾತದಿಂದ ಗ್ರಾ.ಪಂ.ಸಿಬಂದಿ ಸಾವು

- Advertisement -G L Acharya panikkar
- Advertisement -

ಮೂಡುಬಿದಿರೆ: ಗ್ರಾ.ಪಂ.ಸಿಬಂದಿ ಶನಿವಾರ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಪಂಚಾಯತ್ ಕಚೇರಿಯತ್ತ ನಡೆದುಕೊಂಡು ಹೋಗುತ್ತಿದ್ದಾಗ ಹೃದಯಾಘಾತದಿಂದ ನಿಧನ ಹೊಂದಿರುವ ಘಟನೆ ಮೂಡುಬಿದಿರೆಯ, ಕಲ್ಲಮುಂಡೂರು ಎಂಬಲ್ಲಿ ನಡೆದಿದೆ.

ಮೃತರನ್ನು ಚಂದ್ರಹಾಸ (29) ಎಂದು ಗುರುತಿಸಲಾಗಿದೆ.

ಅವರು ಕಲ್ಲಮುಂಡೂರು ಗ್ರಾ.ಪಂ. ವ್ಯಾಪ್ತಿಯ ಬರ್ಕಬೆಟ್ಟು ನಿವಾಸಿ ದಿ| ದಾದು ಅವರ ಪುತ್ರ. ಮನೆಯಿಂದ ನೂರು ಮೀಟರ್ ದೂರದಲ್ಲಿ ಕುಸಿದು ಬಿದ್ದ ಚಂದ್ರಹಾಸ ಅವರನ್ನು ಮೂಡುಬಿದಿರೆ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅದಾಗಲೇ ಅವರು ಕೊನೆಯುಸಿರೆಳೆದಿದ್ದರು.

ಕಳೆದ 10 ವರ್ಷಗಳಿಂದ ಪಂಚಾಯತ್‌ನಲ್ಲಿ ಸಿಬಂದಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅತ್ಯುತ್ತಮ ಕ್ರಿಕೆಟ್ ಆಟಗಾರರಾಗಿದ್ದ ಚಂದ್ರಹಾಸ್ ಅವರು ಸ್ಥಳೀಯ ಕೆಎಫ್‌ಸಿ ತಂಡದ ಸದಸ್ಯರಾಗಿದ್ದರು. ಅಲ್ಲದೆ ಉತ್ತಮ ಚಿತ್ರಕಲಾವಿದರೂ ಆಗಿದ್ದರು. ಅವರ ಸಾವಿನ ವಿಷಯ ತಿಳಿದೊಡನೆ ಸಾವಿರಾರು ಮಂದಿ ಪಂಚಾಯತ್ ಕಚೇರಿಯಲ್ಲಿ ಜಮಾಯಿಸಿ ಮೃತರ ಅಂತಿಮ ದರ್ಶನ ಪಡೆದರು. ಕಲ್ಲಮುಂಡೂರು ಪೇಟೆಯನ್ನು ಸುಮಾರು 2 ತಾಸು ಬಂದ್ ಮಾಡಿ ಮೃತರಿಗೆ ಗೌರವ ಸಲ್ಲಿಸಲಾಯಿತು. ಪಂಚಾಯತ್ ಅಧ್ಯಕ್ಷರು, ಸದಸ್ಯರು, ಸಿಬಂದಿ, ನಾಗರಿಕರ ಸಹಿತ ಕೆಎಫ್‌ಸಿ ತಂಡದವರು ಚಂದ್ರಹಾಸ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!