Friday, June 27, 2025
spot_imgspot_img
spot_imgspot_img

ಮಂಜೇಶ್ವರ : ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಪದವಿ ವಿದ್ಯಾರ್ಥಿನಿ ಮೃತ್ಯು

- Advertisement -
- Advertisement -

ಉಪ್ಪಳ: ವಿಷ ಸೇವಿಸಿ ಗಂಭೀರ ಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಐಲ ಕುದುಪುಳು ಎಂಬಲ್ಲಿ ನಡೆದಿದೆ.

ಐಲ ಕುದುಪುಳು ನಿವಾಸಿ, ನಯಾಬಜಾರ್‌ನಲ್ಲಿ ಆಟೋ ಚಾಲಕರಾಗಿರುವ ಸುರೇಶ್ ಅವರ ಪುತ್ರಿ ಧನ್ಯಶ್ರೀ (19) ಮೃತ ವಿದ್ಯಾರ್ಥಿನಿ.

ಮಂಗಳೂರಿನ ಖಾಸಗಿ ಕಾಲೇಜಿನ ದ್ವಿತೀಯ ವರ್ಷ ಪದವಿ ವಿದ್ಯಾರ್ಥಿನಿಯಾಗಿರುವ ಧನ್ಯಶ್ರೀ 12 ದಿನಗಳ ಹಿಂದೆ ವಿಷ ಸೇವಿಸಿದ್ದರು. ವಿಷ ಸೇವನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!