ಬೆಂಗಳೂರು (ನ6) : ದೀಪಾವಳಿಯ ವೇಳೆಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ಕೊರೊನಾ ಸೋಂಕಿತರಿಗೆ ಆರೋಗ್ಯ ಸಮಸ್ಯೆ ಯಾಗಲಿದೆ. ಅಲ್ಲದೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ವರದಿನ್ನು ನೀಡಿದ್ದಾರೆ.
ಮಾತ್ರವಲ್ಲದೇ ದೆಹಲಿ, ಪಶ್ಚಿಮ ಬಂಗಾಲ ಸೇರಿದಂತೆ ಹಲವು ರಾಜ್ಯಗಳು ದೀಪಾವಳಿಯ ವೇಳೆಯಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪಟಾಕಿ ಮಾರಾಟ ಹಾಗೂ ಸಿಡಿಸುವುದಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗುತ್ತಿದೆ. ಅಧಿಕೃತ ಆದೇಶ ಒಂದೆರಡು ದಿನಗಳಲ್ಲಿ ಹೊರ ಬೀಳಲಿದೆ.
ರಾಜ್ಯದಲ್ಲಿ ಪಟಾಕಿ ನಿಷೇಧದ ಮಾತು ಕೇಳಿಬರುತ್ತಿದ್ದಂತೆಯೇ ಪರ ವಿರೋಧದ ಮಾತುಗಳು ಕೇಳಿಬರುತ್ತಿದೆ. ರಾಜ್ಯ ಸರಕಾರ ಕೇವಲ ದೀಪಾವಳಿಗೆ ಮಾತ್ರವೇ ಪಟಾಕಿ ಸಿಡಿಸಲು ನಿಷೇಧ ಹೇರುತ್ತದೆಯೋ ? ಇಲ್ಲಾ ಸಂಪೂರ್ಣ ನಿಷೇಧ ಹೇರುತ್ತಾ ಅನ್ನೋದು ಅಧಿಕೃತ ಆದೇಶ ಹೊರಬಿದ್ದ ಮೇಲಷ್ಟೇ ತಿಳಿದುಬರಬೇಕಾಗಿದೆ.ಬೆಂಗಳೂರು : ದೀಪಾವಳಿಯ ವೇಳೆಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಪಟಾಕಿಯನ್ನು ಸಿಡಿಸುವುದರಿಂದ ಕೊರೊನಾ ಸೋಂಕಿತರಿಗೆ ಆರೋಗ್ಯ ಸಮಸ್ಯೆ ಯಾಗಲಿದೆ. ಅಲ್ಲದೇ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿಯೂ ಏರಿಕೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ವರದಿನ್ನು ನೀಡಿದ್ದಾರೆ.
ಮಾತ್ರವಲ್ಲದೇ ದೆಹಲಿ, ಪಶ್ಚಿಮ ಬಂಗಾಲ ಸೇರಿದಂತೆ ಹಲವು ರಾಜ್ಯಗಳು ದೀಪಾವಳಿಯ ವೇಳೆಯಲ್ಲಿ ಪಟಾಕಿ ಸಿಡಿಸುವುದಕ್ಕೆ ನಿಷೇಧ ಹೇರಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಪಟಾಕಿ ಮಾರಾಟ ಹಾಗೂ ಸಿಡಿಸುವುದಕ್ಕೆ ನಿಷೇಧ ಹೇರಿ ಆದೇಶ ಹೊರಡಿಸಲಾಗುತ್ತಿದೆ. ಅಧಿಕೃತ ಆದೇಶ ಒಂದೆರಡು ದಿನಗಳಲ್ಲಿ ಹೊರ ಬೀಳಲಿದೆ.
ರಾಜ್ಯದಲ್ಲಿ ಪಟಾಕಿ ನಿಷೇಧದ ಮಾತು ಕೇಳಿಬರುತ್ತಿದ್ದಂತೆಯೇ ಪರ ವಿರೋಧದ ಮಾತುಗಳು ಕೇಳಿಬರುತ್ತಿದೆ. ರಾಜ್ಯ ಸರಕಾರ ಕೇವಲ ದೀಪಾವಳಿಗೆ ಮಾತ್ರವೇ ಪಟಾಕಿ ಸಿಡಿಸಲು ನಿಷೇಧ ಹೇರುತ್ತದೆಯೋ ? ಇಲ್ಲಾ ಸಂಪೂರ್ಣ ನಿಷೇಧ ಹೇರುತ್ತಾ ಅನ್ನೋದು ಅಧಿಕೃತ ಆದೇಶ ಹೊರಬಿದ್ದ ಮೇಲಷ್ಟೇ ತಿಳಿದುಬರಬೇಕಾಗಿದೆ.