- Advertisement -
- Advertisement -
ನವದೆಹಲಿ: ನಿಷೇಧಿತ ಸಿಖ್ ಸಂಘಟನೆಯೊಂದು ರಾಜಧಾನಿ ದೆಹಲಿಯಲ್ಲಿರುವ ವಿದ್ಯುತ್ ಉತ್ಪಾದನೆ ಮತ್ತು ಪೂರೈಕೆ ಕೇಂದ್ರಗಳ ಮೇಲೆ ದಾಳಿ ನಡೆಸುವ ಬೆದರಿಕೆಯೊಡ್ಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಗಣರಾಜ್ಯೋತ್ಸವ ಸಂಭ್ರಮಕ್ಕೆ ವಿಘ್ನ ಸೃಷ್ಟಿಸಲು ಕೆಲವು ಶಕ್ತಿಗಳು ಯತ್ನಿಸಲಿವೆ ಎಂಬ ಮಾಹಿತಿ ಕೂಡ ದೊರೆತಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಇದುವರೆಗೆ ಕಂಡು ಕೇಳರಿಯದ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ದೆಹಲಿ ಪ್ರವೇಶಿಸುವ ಎಲ್ಲ ವಾಹನಗಳನ್ನು ತಪಾಸಣೆಗೆ ಗುರಿಪಡಿಸಲಾಗುತ್ತಿದೆ. ಸಂಶಯಾಸ್ಪದ ವಸ್ತುಗಳು ಕಂಡು ಬಂದರೆ ಹೊಡೆದುರುಳಿಸಲು ಆದೇಶ ನೀಡಲಾಗಿದೆ.
- Advertisement -