Saturday, June 28, 2025
spot_imgspot_img
spot_imgspot_img

ದೆಹಲಿ ಕರ್ನಾಟಕ ಭವನದ ನೌಕರ ಆತ್ಮಹತ್ಯೆ

- Advertisement -
- Advertisement -

ದೆಹಲಿಯ ಕರ್ನಾಟಕ ಭವನದಲ್ಲಿ ನೌಕರರಾಗಿದ್ದ ವಿಜಯನಗೆ ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಾರುತಿ (35) ಆತ್ಮಹತ್ಯೆಗೆ ಶರಣಾದ ನೌಕರ ಎಂದು ಗುರುತಿಸಲಾಗಿದೆ.

ಸಾವನ್ನಪ್ಪಿದ ಮಾರುತಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಎಂ.ಬಿ‌. ಅಯ್ಯನಹಳ್ಳಿ ಗ್ರಾಮದವರು. ಎರಡು ಮೂರು ದಿನಗಳ ಹಿಂದೆ ದೆಹಲಿಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದರು. ಪತ್ನಿ ಮಕ್ಕಳನ್ನು ಪತ್ನಿಯ ತವರು ಮನೆಗೆ ಬಿಟ್ಟು ತಂದೆ, ತಾಯಿಯನ್ನು ನೋಡಿಕೊಂಡು ಬರುವೆ ಎಂದು ಅಯ್ಯನಹಳ್ಳಿಗೆ ಬಂದಿದ್ದರು.

ಮನೆಗೆ ಬಂದ ಮಾರುತಿ ಕಾನಾಹೊಸಳ್ಳಿ ಹೊರವಲದ ಹುಣಸೆ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಕರ್ನಾಟಕ ಭವನದ ಕಿಚನ್ ವಿಭಾಗದಲ್ಲಿ ಮಾರುತಿ ಕೆಲಸ ಮಾಡ್ತಿದ್ದರು. ಪತ್ನಿ ನೀಡಿದ ದೂರಿನ ಆಧಾರದ ಮೇಲೆ ಕಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!