Sunday, June 21, 2026
spot_imgspot_img
spot_imgspot_img

ವಿಟ್ಲ-ಉಕ್ಕುಡ-ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ವಿವಿಧ ವಾಹನ ಮಾಲಕರ ಸಂಘದಿಂದ ರಸ್ತೆ ತಡೆದು ಬೃಹತ್‌ ಪ್ರತಿಭಟನೆ

- Advertisement -
- Advertisement -

ವಿಟ್ಲ: ಆಟೋ ರಿಕ್ಷಾ, ಟೂರಿಸ್ಟ್ ಕಾರು, ಖಾಸಗಿ ಬಸ್, ಲಾರಿ ಮಾಲಕರ ಸಂಘದ ವತಿಯಿಂದ ವಿಟ್ಲ-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ರಸ್ತೆಯ ಅಭಿವೃದ್ಧಿಗೆ ಆಗ್ರಹಿಸಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಯಿತು.

ಪ್ರತಿಭಟನಾಕಾರರು ರಾಜ್ಯ ಸರಕಾರದ ವಿರುದ್ಧ ಘೋಷಣೆ ಹಾಕಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಆರಂಭಿಸಿ, ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ ಎಂದು ಪಟ್ಟು ಹಿಡಿದರು. ಬಳಿಕ ಸ್ಥಳಕ್ಕಾಗಮಿಸಿದ ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರತಿಭಟನಾಕಾರರು ತಮ್ಮ ಅಳಲನ್ನು ತೋಡಿಕೊಂಡು ಕೂಡಲೆ ರಸ್ತೆ ಹೊಂಡವನ್ನು ಮುಚ್ಚುವಂತೆ ವಿನಂತಿಸಿದರು. ಈ ವೇಳೆ ಅಧಿಕಾರಿಗಳು ಮಾತನಾಡಿ ಕೆಲಸದ ಬಗೆಗಿನ ಪ್ರಸ್ತಾವನೆಯನ್ನು ಈಗಾಗಲೇ ಕಳುಹಿಸಿಕೊಡಲಾಗಿದೆ. ಕೆಲವೇ ದಿನಗಳಲ್ಲಿ ಈ ಭಾಗದ ಢಾಮರೀಕರಣ ಪ್ರಕ್ರೀಯೆ ಆರಂಭಗೊಳ್ಳಲಿದೆ ಎಂದರು. ಈ ವೇಳೆ ಮತ್ತಷ್ಟು ಕೆರಳಿದ ಪ್ರತಿಭಟನಾಕಾರರು ಮೂರು ದಿನದೊಳಗೆ ರಸ್ತೆ ಹೊಂಡವನ್ನು ಮುಚ್ಚದಿದ್ದಲ್ಲಿ ವಿಟ್ಲ ನಾಲ್ಕು ಮಾರ್ಗದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡಲಾಗುವುದು ಎಂದರು. ಬಳಿಕ ಪ್ರತಿಭಟನಾಕಾರರ‌ನ್ನು ಸಮಾಧಾನ ಪಡಿಸಿದ ಅಧಿಕಾರಿಗಳು ಕೂಡಲೇ ಹೊಂಡಮುಚ್ಚುವ ಕೆಲಸ ಮಾಡಲಾಗುವುದು ಎಂದು ಭರವಸೆ ನೀಡಿದರು. ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು.

ರಸ್ತೆ ತಡೆದು ಪ್ರತಿಭಟನೆ ಮಾಡಿದ ಪರಿಣಾಮ ಸುಮಾರು ಅರ್ಧ ತಾಸುಗಳ ವರೆಗೆ ವಾಹನ ಸಂಚಾರ ಸ್ಥಗಿತಗೊಂಡಿತ್ತು. ವಿಟ್ಲ ಪೊಲೀಸರು ಬಂದೋಬಸ್ತ್ ಏರ್ಪಡಿಸಿದ್ದರು.

ಈ ಸಂದರ್ಭದಲ್ಲಿ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯ್ತೋಟು, ಬಸ್ ಮಾಲಕ ಅರುಣ್ ವಿಟ್ಲ, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್ ವಿಟ್ಲ, ಲಾರಿ ಮಾಲಕ ಚಾಲಕ ಸಂಘದ ಅಧ್ಯಕ್ಷ ರಮೇಶ್ ವರಪ್ಪಾದೆ, ಆಟೋ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ವಸಂತ ಎನ್, ಮಹಾಶಕ್ತಿಕೇಂದ್ರದ ಅಧ್ಯಕ್ಷ ಉದಯಕುಮಾರ್ ಆಲಂಗಾರು, ಪ್ರಮುಖರಾದ‌ ಕೃಷ್ಣಯ್ಯ ವಿಟ್ಲ, ಬಿಜೆಪಿ ಪಕ್ಷದ ಪ್ರಮುಖ ಮೋಹನದಾಸ್ ಉಕ್ಕುಡ, ನರಸಪ್ಪ ಪೂಜಾರಿ, ಸದಾನಂದ ಗೌಡ ಸೇರಾಜೆ, ವಿಟ್ಲ ಪಟ್ಟಣ ಪಂಚಾಯತ್ ಸದಸ್ಯರಾದ ಹರೀಶ್, ಜಯಂತ್, ವಸಂತ, ರಿಕ್ಷಾ ಮಾಲಕ ವೆಂಕಪ್ಪ ನಾಯ್ಕ್ , ಬಾಸ್ಕರ, ಲಾರಿ ಮಾಲಕ ಜಯಪ್ರಕಾಶ್, ಹರೀಶ್ ಉಮಾಮಹೇಶ್ವರ, ನಾಗೇಶ್ ಬಸವನಗುಡಿ ಸೇರಿದಂತೆ ನೂರಾರು ನಾಗರಿಕರು ಉಪಸ್ಥಿತರಿದ್ದರು.

- Advertisement -

Related news

error: Content is protected !!