Monday, June 30, 2025
spot_imgspot_img
spot_imgspot_img

PUC ಡಿಸ್ಟಿಂಕ್ಷನ್‌ ವಿದ್ಯಾರ್ಥಿನಿ ಡೆಂಘೀ ಮಹಾಮಾರಿಗೆ ಬಲಿ

- Advertisement -
- Advertisement -

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಘೀ ಮಹಾಮಾರಿಯ ಅಟ್ಟಹಾಸ ಜೋರಾಗುತ್ತಿದೆ. ಪ್ರತಿ ದಿನ ನೂರಾರು ಮಂದಿ ಡೆಂಘೀ ಜ್ವರಕ್ಕೆ ತುತ್ತಾಗುತ್ತಿದ್ದರೆ, ಸಾವಿನ ಸಂಖ್ಯೆ ಕೂಡ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ.

ಗೌರಿಬಿದನೂರು ತಾಲೂಕಿನ ನಾಮಗೊಂಡ್ಲು ಗ್ರಾಮದ ಯಶಸ್ವಿನಿ (18 ) ಮೃತ ದುರ್ದೈವಿ.

ಮೃತ ಯಶಸ್ವಿನಿ ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರಂತೆ. ಹೀಗಾಗಿ ಆಕೆಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ನಿನ್ನೆ ಸಂಜೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಯಶಸ್ವಿನಿ ಮೃತಪಟ್ಟಿದ್ದಾಳೆ.ಮೃತ ಯುವತಿ ಯಶಸ್ವಿನಿ ದ್ವಿತೀಯ ಪಿಯುಸಿಯಲ್ಲಿ ಶೇ 95% ಅಂಕ ಪಡೆದಿದ್ದಳು. ಪ್ರಥಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು. ಯುವತಿ ಸಾವನ್ನಪ್ಪುತ್ತಿದ್ದಂತೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.

- Advertisement -

Related news

error: Content is protected !!