ದುಷ್ಕರ್ಮಿಗಳ ತಂಡವೊಂದು ಮನೆಗೆ ನುಗ್ಗಿ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಗ್ರಾಮಾಂತರ ಜಿಲ್ಲೆಯ ಉಪನಿರ್ದೇಶಕಿ ಪ್ರತಿಮಾ (45) ದುಷ್ಕರ್ಮಿಗಳಿಂದ ಹತ್ಯೆಯಾದ ಮಹಿಳೆ. ಪ್ರತಿಮಾ ಮೂಲತಃ ಶಿವಮೊಗ್ಗದವರಾಗಿದ್ದು, ಕಳೆದ 8 ವರ್ಷಗಳಿಂದ ಬೆಂಗಳೂರಿನ ದೊಡ್ಡ ಕಲ್ಲಸಂದ್ರದ ಅಪಾರ್ಟ್ಮೆಂಟ್ವೊಂದರಲ್ಲಿ ವಾಸವಿದ್ದರು.
ನ. 4 ರಂದು ಚಾಲಕ ಪ್ರತಿಮಾ ಅವರನ್ನು ಮನೆಗೆ ಬಿಟ್ಟು ತೆರಳಿದ್ದರು. ನ 5 ರಂದು ಪ್ರತಿಮಾ ಅವರ ಮೊಬೈಲ್ ಫೋನ್ ಗೆ ಸಹೋದರ ಕರೆ ಮಾಡಿದಾಗ ಪ್ರತಿಮಾ ಕರೆಗಳಿಗೆ ಸ್ಪಂದಿಸಿರಲಿಲ್ಲ. ಅನುಮಾನಗೊಂಡು ಮನೆಗೆ ಬಂದು ನೋಡಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಮೇಲ್ನೋಟಕ್ಕೆ ಪರಿಚಯಸ್ಥರೇ ಈ ಕೃತ್ಯವೆಸಗಿರುವ ಅನುಮಾನ ವ್ಯಕ್ತವಾಗಿದ್ದು, ಆದರೆ ಸ್ಪಷ್ಟ ಕಾರಣ ಇನ್ನೂ ತಿಳಿದು ಬಂದಿಲ್ಲ. ಈ ಬಗ್ಗೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಕೊಲೆಗಾರರ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.