- Advertisement -
- Advertisement -
ವಿಟ್ಲ: ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗಾಭ್ಯಾಸ ಬಹಳ ಉಪಯುಕ್ತವಾದುದು. ವಿದ್ಯಾರ್ಥಿ ಜೀವನದಿಂದಲೇ ಯೋಗಭ್ಯಾಸ ರೂಢಿಸಿಕೊಳ್ಳವುದು ಉತ್ತಮ ಎಂದು ಗುಣಶ್ರೀ ವಿದ್ಯಾಲಯದ ಸಂಚಾಲಕ ವೇಣುಗೋಪಾಲ ಶೆಟ್ಟಿ ಯೋಗ ತರಗತಿಯ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ಯೋಗ ಗುರು ಆನಂದ ಶೆಟ್ಟಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಗುರು ರಾಜಾರಾಮ ವರ್ಮ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
- Advertisement -